ಮೈಸೂರು ನಗರ

ನವೀಕರಿಸಿದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿದ ಶಾಸಕ ಕೆ. ಹರೀಶ್ ಗೌಡ

2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಿದ ಕಟ್ಟಡ

ಮೈಸೂರು: ನಗರದ ಕೆಜಿ ಕೊಪ್ಪಲಿನಲ್ಲಿ ಆಯುಷ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕಟ್ಟಡವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಶುಕ್ರವಾರ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ನಮ್ಮ ಆಯುರ್ವೇದ ಚಿಕಿತ್ಸೆಗೆ ಇದೆ. ಈಗ ಆಧುನಿಕತೆಯ ಚಿಕಿತ್ಸೆಯ ಜತೆಗೆ ಪ್ರಾಕೃತಿಕ ಚಿಕಿತ್ಸೆಗೂ ಜನತೆ  ಮೊರೆ ಹೋಗುತ್ತಿದ್ದಾರೆ. ಇದಕ್ಕೆ ನಿತ್ಯ ಸೈಕಲಿಂಗ್ ಹಾಗೂ ಚಾಮುಂಡಿ ಬೆಟ್ಟ ಹತ್ತುವುದು, ಯೋಗ ಅಭ್ಯಾಸ ಮಾಡುವವರ ಸಂಖ್ಯೆ ಹೆಚ್ಚಾಗಿರುವುದೇ ಉದಾಹರಣೆಯಾಗಿದೆ. 2 ಕೋಟಿ ರೂ.ವೆಚ್ಚದಲ್ಲಿ ಆಸ್ಪತ್ರೆ ನವೀಕರಿಸಿ ಲೋಕಾರ್ಪಣೆ ಗೊಳಿಸಲಾಗಿದೆ. ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಯೋಗ, ನೇಚರ್ ಪಿಯೋಥೆರಪಿ, ಪಿಜಿಯೋಥೆರಪಿ ಸೇರಿ 10 ಬಗೆಯ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ತಲೆನೋವು, ಮಂಡಿನೋವು ಸೇರಿ ಎಲ್ಲಾ ಬಗೆಯ ಕಾಯಿಲೆಗಳಿಗೂ ಇಲ್ಲಿ ಚಿಕಿತ್ಸಾ ಸೇವೆ ನೀಡಲಿದೆ. ಇಬ್ಬರೂ ವೈದ್ಯರು, ಇಬ್ಬರೂ ಥೆರೋಪಿಯಸ್ಟ್ ಸೇರಿ ಅನೇಕರು ಸೇವೆಗಿದ್ದು, ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5.00 ರವರೆಗೆ ತೆರೆದಿರುತ್ತದೆ ಎಂದು ಹೇಳಿದರು.

ಈ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಮುಂದಿನ ದಿನಗಳಲ್ಲಿ ಮಧುಮೇಹಿಗಳಿಗಾಗಿಯೇ ಮೈಸೂರಿನಲ್ಲಿ ಪ್ರಥಮವಾಗಿ ಮಧುಮೇಹಿ ಘಟಕವನ್ನು ಸ್ಥಾಪಿಸಲಾಗುವುದೆಂದು ಜಿಲ್ಲಾ ಆಯುಷ್ ಅಧಿಕಾರಿಯಾದ ಡಾ.ಪುಷ್ಪ ರವರು ತಿಳಿಸಿದರು.

ಈ ವೇಳೆ ಮುಡಾ ಅಧ್ಯಕ್ಷ ಮರೀಗೌಡ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,  ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ  ರವಿ, ಶ್ರೀನಿವಾಸ, ಕಾಂಗ್ರೆಸ್ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…

11 mins ago

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು…

16 mins ago

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…

50 mins ago

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

3 hours ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

3 hours ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

3 hours ago