2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಿದ ಕಟ್ಟಡ
ಮೈಸೂರು: ನಗರದ ಕೆಜಿ ಕೊಪ್ಪಲಿನಲ್ಲಿ ಆಯುಷ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕಟ್ಟಡವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಶುಕ್ರವಾರ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಸಾವಿರಾರು ವರ್ಷಗಳ ಇತಿಹಾಸ ನಮ್ಮ ಆಯುರ್ವೇದ ಚಿಕಿತ್ಸೆಗೆ ಇದೆ. ಈಗ ಆಧುನಿಕತೆಯ ಚಿಕಿತ್ಸೆಯ ಜತೆಗೆ ಪ್ರಾಕೃತಿಕ ಚಿಕಿತ್ಸೆಗೂ ಜನತೆ ಮೊರೆ ಹೋಗುತ್ತಿದ್ದಾರೆ. ಇದಕ್ಕೆ ನಿತ್ಯ ಸೈಕಲಿಂಗ್ ಹಾಗೂ ಚಾಮುಂಡಿ ಬೆಟ್ಟ ಹತ್ತುವುದು, ಯೋಗ ಅಭ್ಯಾಸ ಮಾಡುವವರ ಸಂಖ್ಯೆ ಹೆಚ್ಚಾಗಿರುವುದೇ ಉದಾಹರಣೆಯಾಗಿದೆ. 2 ಕೋಟಿ ರೂ.ವೆಚ್ಚದಲ್ಲಿ ಆಸ್ಪತ್ರೆ ನವೀಕರಿಸಿ ಲೋಕಾರ್ಪಣೆ ಗೊಳಿಸಲಾಗಿದೆ. ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಯೋಗ, ನೇಚರ್ ಪಿಯೋಥೆರಪಿ, ಪಿಜಿಯೋಥೆರಪಿ ಸೇರಿ 10 ಬಗೆಯ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ತಲೆನೋವು, ಮಂಡಿನೋವು ಸೇರಿ ಎಲ್ಲಾ ಬಗೆಯ ಕಾಯಿಲೆಗಳಿಗೂ ಇಲ್ಲಿ ಚಿಕಿತ್ಸಾ ಸೇವೆ ನೀಡಲಿದೆ. ಇಬ್ಬರೂ ವೈದ್ಯರು, ಇಬ್ಬರೂ ಥೆರೋಪಿಯಸ್ಟ್ ಸೇರಿ ಅನೇಕರು ಸೇವೆಗಿದ್ದು, ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5.00 ರವರೆಗೆ ತೆರೆದಿರುತ್ತದೆ ಎಂದು ಹೇಳಿದರು.
ಈ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಮುಂದಿನ ದಿನಗಳಲ್ಲಿ ಮಧುಮೇಹಿಗಳಿಗಾಗಿಯೇ ಮೈಸೂರಿನಲ್ಲಿ ಪ್ರಥಮವಾಗಿ ಮಧುಮೇಹಿ ಘಟಕವನ್ನು ಸ್ಥಾಪಿಸಲಾಗುವುದೆಂದು ಜಿಲ್ಲಾ ಆಯುಷ್ ಅಧಿಕಾರಿಯಾದ ಡಾ.ಪುಷ್ಪ ರವರು ತಿಳಿಸಿದರು.
ಈ ವೇಳೆ ಮುಡಾ ಅಧ್ಯಕ್ಷ ಮರೀಗೌಡ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ರವಿ, ಶ್ರೀನಿವಾಸ, ಕಾಂಗ್ರೆಸ್ ಮುಖಂಡರು ಸೇರಿ ಹಲವರು ಭಾಗಿಯಾಗಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…