ಮೈಸೂರು ನಗರ

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ವಿ.ವಿ ವ್ಯಾಪ್ತಿಯ ಕಾಲೇಜುಗಳು, ಮಾನಸಗಂಗೋತ್ರಿಯಲ್ಲಿ ಪಿಎಚ್.ಡಿ. ಪ್ರವೇಶಾತಿ ಪಡೆದು ಸಂಶೋಧನೆ ಕೈಗೊಂಡಿರುವ ಸಂಶೋಧಕರುಗಳು 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಶೇಷ ಘಟಕದ ವತಿಯಿಂದ ನೀಡಲಾಗುವ ಶಿಷ್ಯವೇತನಕ್ಕೆ 96 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಮೈಸೂರು ವಿ.ವಿ ಕೇವಲ 20 ಸಂಶೋಧಕರುಗಳಿಗೆ ಮಾತ್ರ ಶಿಷ್ಯವೇತನ ಮಂಜೂರು ಮಾಡುವ ವಿದ್ಯಾರ್ಥಿ ವಿರೋಧಿ ಮಾನದಂಡ ನಿಗದಿ ಮಾಡಿದೆ. ಇದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳು ಶಿಷ್ಯವೇತನ ರಹಿತವಾಗಿ ಪಿಎಚ್.ಡಿ. ಪದವಿ ಪಡೆಯಲು ಹರಸಾಹಸ ಪಡುವಂತಾಗಿದೆ ಎಂದು ಕಿಡಿಕಾರಿದರು.

ಹೆಚ್ಚುವರಿ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳಿಗೆ ವರ್ಷಕ್ಕೆ 23 ಕೋಟಿ ರೂ.ಗಳನ್ನು ಅನಾವಶ್ಯವಾಗಿ ನೀಡುತ್ತಿದ್ದು, ಇದು ವಿಶ್ವವಿದ್ಯಾನಿಲಯದ ಹಣ ಪೋಲಾಗುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿ. ಅಲ್ಲದೆ, ಈ ವರ್ಷದ ವಿಶ್ವವಿದ್ಯಾನಿಲಯದ ಬಜೆಟ್‌ನ ಒಟ್ಟು 400 ಕೋಟಿ ರೂ.ಗಳಲ್ಲಿ ನಿಯಮಾನುಸಾರ ಶೇ.24ರಷ್ಟನ್ನು ಎಸ್‌ಸಿ, ಎಸ್‌ಟಿ ಉಪಯೋಜನೆಗಳಿಗೆ ಮೀಸಲಿಟ್ಟರೆ 96-97 ಕೋಟಿ ರೂ. ನೀಡಬೇಕಾಗುತ್ತದೆ. ಆದರೆ, ವಿಶ್ವವಿದ್ಯಾನಿಲಯ ಎಸ್‌ಸಿ, ಎಸ್‌ಟಿ ಸಂಶೋಧನೆಗೆ ಯಾವುದೇ ರೀತಿಯ ಮೊತ್ತವನ್ನು ಮೀಸಲಿಡದೆ ವಂಚಿಸುತ್ತಿದೆ. ಕೂಡಲೇ ಪ್ರಸ್ತುತ ಸಾಲಿನಲ್ಲಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಸಂಶೋಧಕರುಗಳಿಗೂ ತಾರತಮ್ಯವಿಲ್ಲದೆ ಶಿಷ್ಯವೇತನವನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಸಂಚಾಲಕರಾದ ರವಿಕುಮಾರ್ ಮುಡಿಗುಂಡ, ನವೀನ್ ಅಳಗಂಚಿ, ಮಾದೇಶ್, ದೀಪ, ಮೌನ ದೊರೆ, ಧೀರಜ್, ನವೀನ್, ಬಿ.ಎನ್.ವಿಶಾಖ್, ಸಣ್ಣಮಾದು, ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago