ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ವಿರೋಧಿಸಿ ನಿವಾಸಿಗಳಿಂದ ಪ್ರತಿಭಟನೆ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ ಹಾಗೂ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ನಿವಾಸಿಗಳು, ದೇವಸ್ಥಾನದ ಆವರಣದಲ್ಲಿ ಕಟ್ಟಡ ನಿರ್ಮಾಣದಿಂದ ಮೂಲ ದೇವಸ್ಥಾನದ ಗೋಪುರಕ್ಕೆ ಧಕ್ಕೆ ಬರಲಿದೆ. ಮೇಲ್ಭಾಗದಲ್ಲಿ ಜಾಗವೇ ಇಲ್ಲ, ಈ ನಡುವೆ ಈ ರೀತಿ ಅಗೆದು ದೇವಸ್ಥಾನಕ್ಕೆ ಧಕ್ಕೆ ತರುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ ಕಾರ್ಯ: ಐತಿಹಾಸಿಕ ಕುರುಹುಗಳು ಪತ್ತೆ

ಗದಗ: ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ…

7 mins ago

ಬ್ಯಾಲೆಟ್‌ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣೆ ಆಯುಕ್ತ ಸಂಗ್ರೇಶ್‌

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್…

13 mins ago

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧೆ ವಿಚಾರ: ಶಾಸಕ ಜಿ.ಟಿ.ದೇವೇಗೌಡ ಮೊದಲ ಪ್ರತಿಕ್ರಿಯೆ

ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ…

47 mins ago

ಹುಣಸೂರು| ಅರಣ್ಯಕ್ಕೆ ಬೆಂಕಿ: 30 ಎಕರೆ ಕುರುಚಲು ಕಾಡು ನಾಶ

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು…

2 hours ago

ಬಿಗ್ ಬಾಸ್ ಗೆದ್ದ ಗಿಲ್ಲಿ ನಟನನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ…

2 hours ago

ಮೈಸೂರು| ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.…

3 hours ago