ಮೈಸೂರು ನಗರ

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು ದಾವಣಗೆರೆಯ ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್ ದೇವರಮನಿ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ, ನಿವೇಶನಗಳ ಹೆಸರಿನಲ್ಲಿ ಈವರೆಗೆ ಮೈಸೂರು ಸೇರಿದಂತೆ ರಾಜ್ಯದಲ್ಲಿ ಹಲವಾರು ಕೆರೆಕಟ್ಟೆಗಳನ್ನು ಮುಚ್ಚಲಾಗಿದ್ದು, ಜಲಮೂಲಗಳಿಗೆ ಕಂಟಕ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದೀಗ ನಗರದ ಕುರುಬಾರಹಳ್ಳಿ ಗ್ರಾಮದ ಸರ್ವೇ ನಂ.4ರಲ್ಲಿ ಎಂಡಿಎ ವತಿಯಿಂದ ನಿವೇಶನಗಳನ್ನು ನಿರ್ಮಿಸಲಾಗಿದೆ. ಇದರಿಂದ ಪ್ರಕೃತಿ ಮತ್ತು ಜಲಮೂಲಗಳಿಗೆ ಹಾನಿಯಾಗಿದ್ದು, ಭೂಗರ್ಭದಲ್ಲಿ ಜಲ ಮಣ್ಣು ಕುಸಿಯುವ ಅಪಾಯವಿದೆ. ಕೂಡಲೇ ಎಂಡಿಎ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಪರಿಸರ ಸಮತೋಲನ ಕಾಪಾಡಲು ಹಾಗೂ ಭವಿಷ್ಯದಲ್ಲಿ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ನಿವೇಶಗಳನ್ನು ತೆರವುಗೊಳಿಸಬೇಕು ಎಂದರು.

ಸರ್ವೇ ನಂ.4ರ ಜಲಮೂಲ ಪ್ರದೇಶದ ನಿವೇಶನಗಳನ್ನು ರದ್ದುಪಡಿಸಿ, ತೆರವು ಮಾಡಬೇಕು. ಹಾಳಾಗಿರುವ ಕೆರೆ, ಕಟ್ಟೆಗಳನ್ನು ಪುನರ್‌ಸ್ಥಾಪಿಸಿ ಸಂರಕ್ಷಿಸಬೇಕು. ನಗರದ ದೊಡ್ಡಕೆರೆಯನ್ನು ಮೂಲ ಸ್ಥಿತಿಗೆ ತಂದು ಪುನರುಜ್ಜೀವನಗೊಳಿಸಬೇಕು. ಪರಿಸರ ಹಾನಿಗೆ ಕಾರಣವಾದ ಯೋಜನೆಗಳನ್ನು ಮರುಪರಿಶೀಲಿಸಿ, ನಗರದ ಮಾಲ್ ಆಫ್ ಮೈಸೂರ್‌ಗೆ ನೀಡಿದ ಅನುಮೋದನೆಯನ್ನು ರದ್ದುಗೊಳಿಸಬೇಕು. ಲಿಂಗಾಂಬುಧಿ ಕೆರೆಯನ್ನು ಸಂಪೂರ್ಣವಾಗಿ ಪುನರ್ ಸ್ಥಾಪಿಸಿ ಅದರ ಆವರಣದ ಸುತ್ತಲಿನ ಅಕ್ರಮ ನಿರ್ಮಾಣಗಳನ್ನು ಕ್ರಮ ಜರುಗಿಸಿ ತೆರವುಗೊಳಿಸಬೇಕು. ಈ ಎಲ್ಲಾ ಮನವಿಗಳನ್ನು ಪರಿಗಣಿಸಿ 15 ದಿನಗಳೊಳಗಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಎಚ್ಚರಿಸಿದರು.

ಎಸ್.ಮಾಲತೇಶ್, ವಿಜಯ್‌ಕುಮಾರ್, ಎಂ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago