ಮೈಸೂರು ನಗರ

ತಾಪಮಾನ ಹೆಚ್ಚಳ: ಮೈಸೂರಿಗೆ ಲಗ್ಗೆಯಿಟ್ಟ ಐಸ್ ಆ್ಯಪಲ್

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ ಐಸ್ ಆ್ಯಪಲ್ ದೇಹಕ್ಕೆ ಬಹಳ ತಂಪು. ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವಡೆ ಬೀದಿ ಬದಿಗಳಲ್ಲಿ ಐಸ್ ಆ್ಯಪಲ್ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು, ಮಾರಾಟಗಾರರು ಫುಲ್‌ ಖುಷ್‌ ಆಗಿದ್ದಾರೆ.

ತಮಿಳುನಾಡು ಭಾಗದಲ್ಲಿ ಸ್ವಾಭಾವಿಕವಾಗಿ ಸಿಗುವ ಈ ಪಾನೀಯಕ್ಕೆ ಮೈಸೂರಿನಲ್ಲಿ ಫುಲ್ ಡಿಮ್ಯಾಂಡ್ ಶುರುವಾಗಿದ್ದು, ಗ್ರಾಹಕರಂತೂ ಇದನ್ನು ಕೊಂಡುಕೊಳ್ಳಲು ಮುಗಿಬಿದ್ದಿದ್ದಾರೆ. ಮೂರು ಎಳನೀರಿಗೆ ಈ ಒಂದು ಒಣ ಎಳನೀರು ಸಮವಾಗಿದ್ದು, ಸ್ವಲ್ಪ ಪ್ರಮಾಣದ ನೀರು ಇರುವ ಕಾಯಿ ಸೇವಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ.

ನೆರೆಯ ತಮಿಳುನಾಡಿನ ಆಂಬೂರು, ವೆಲ್ಲೂರು ಜಿಲ್ಲೆಗಳಿಂದ ಬರುವ ಈ ಪಣ ಎಳನೀರಿನ ಕಾಯಿಗೆ 40 ರಿಂದ 50 ರೂ ಬೆಲೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಮೈಸೂರಿಗೆ ಬರುತ್ತಿರುವ ವ್ಯಾಪಾರಸ್ಥರು ಒಳ್ಳೆಯ ಲಾಭ ಮಾಡಿಕೊಂಡು ಹಿಂದಿರುಗುತ್ತಿದ್ದಾರೆ.

ಪಣ ಎಳೆ ನೀರನ್ನು ಕೊಂಡು ಸಂತಸ ವ್ಯಕ್ತಪಡಿಸಿದ ಗ್ರಾಹಕರು, ಇದು ಆರೋಗ್ಯಕ್ಕೆ ಬಹಳ ಅನುಕೂಲಕಾರಿ. ರಾಸಾಯನಿಕಯುಕ್ತ ಪಾನೀಯ ಸೇವನೆ ಬದಲು, ಇಂತಹ ಸೀಜನ್ ಫ್ರೂಟ್ಸ್ ಗಳನ್ನ ಸೇವಿಸಬೇಕು. ಆಗ ಮನುಷ್ಯರಿಗೆ ಯಾವುದೇ ರೋಗಗಳು ಬರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

52 mins ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

57 mins ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

1 hour ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

1 hour ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

1 hour ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

1 hour ago