ಮೈಸೂರು ನಗರ

ತಾಪಮಾನ ಹೆಚ್ಚಳ: ಮೈಸೂರಿಗೆ ಲಗ್ಗೆಯಿಟ್ಟ ಐಸ್ ಆ್ಯಪಲ್

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ ಐಸ್ ಆ್ಯಪಲ್ ದೇಹಕ್ಕೆ ಬಹಳ ತಂಪು. ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವಡೆ ಬೀದಿ ಬದಿಗಳಲ್ಲಿ ಐಸ್ ಆ್ಯಪಲ್ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು, ಮಾರಾಟಗಾರರು ಫುಲ್‌ ಖುಷ್‌ ಆಗಿದ್ದಾರೆ.

ತಮಿಳುನಾಡು ಭಾಗದಲ್ಲಿ ಸ್ವಾಭಾವಿಕವಾಗಿ ಸಿಗುವ ಈ ಪಾನೀಯಕ್ಕೆ ಮೈಸೂರಿನಲ್ಲಿ ಫುಲ್ ಡಿಮ್ಯಾಂಡ್ ಶುರುವಾಗಿದ್ದು, ಗ್ರಾಹಕರಂತೂ ಇದನ್ನು ಕೊಂಡುಕೊಳ್ಳಲು ಮುಗಿಬಿದ್ದಿದ್ದಾರೆ. ಮೂರು ಎಳನೀರಿಗೆ ಈ ಒಂದು ಒಣ ಎಳನೀರು ಸಮವಾಗಿದ್ದು, ಸ್ವಲ್ಪ ಪ್ರಮಾಣದ ನೀರು ಇರುವ ಕಾಯಿ ಸೇವಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ.

ನೆರೆಯ ತಮಿಳುನಾಡಿನ ಆಂಬೂರು, ವೆಲ್ಲೂರು ಜಿಲ್ಲೆಗಳಿಂದ ಬರುವ ಈ ಪಣ ಎಳನೀರಿನ ಕಾಯಿಗೆ 40 ರಿಂದ 50 ರೂ ಬೆಲೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಮೈಸೂರಿಗೆ ಬರುತ್ತಿರುವ ವ್ಯಾಪಾರಸ್ಥರು ಒಳ್ಳೆಯ ಲಾಭ ಮಾಡಿಕೊಂಡು ಹಿಂದಿರುಗುತ್ತಿದ್ದಾರೆ.

ಪಣ ಎಳೆ ನೀರನ್ನು ಕೊಂಡು ಸಂತಸ ವ್ಯಕ್ತಪಡಿಸಿದ ಗ್ರಾಹಕರು, ಇದು ಆರೋಗ್ಯಕ್ಕೆ ಬಹಳ ಅನುಕೂಲಕಾರಿ. ರಾಸಾಯನಿಕಯುಕ್ತ ಪಾನೀಯ ಸೇವನೆ ಬದಲು, ಇಂತಹ ಸೀಜನ್ ಫ್ರೂಟ್ಸ್ ಗಳನ್ನ ಸೇವಿಸಬೇಕು. ಆಗ ಮನುಷ್ಯರಿಗೆ ಯಾವುದೇ ರೋಗಗಳು ಬರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 mins ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

30 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

5 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

8 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

8 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 hours ago