ಮೈಸೂರು ನಗರ

ತಾಪಮಾನ ಹೆಚ್ಚಳ: ಮೈಸೂರಿಗೆ ಲಗ್ಗೆಯಿಟ್ಟ ಐಸ್ ಆ್ಯಪಲ್

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ ಐಸ್ ಆ್ಯಪಲ್ ದೇಹಕ್ಕೆ ಬಹಳ ತಂಪು. ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಹಲವಡೆ ಬೀದಿ ಬದಿಗಳಲ್ಲಿ ಐಸ್ ಆ್ಯಪಲ್ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು, ಮಾರಾಟಗಾರರು ಫುಲ್‌ ಖುಷ್‌ ಆಗಿದ್ದಾರೆ.

ತಮಿಳುನಾಡು ಭಾಗದಲ್ಲಿ ಸ್ವಾಭಾವಿಕವಾಗಿ ಸಿಗುವ ಈ ಪಾನೀಯಕ್ಕೆ ಮೈಸೂರಿನಲ್ಲಿ ಫುಲ್ ಡಿಮ್ಯಾಂಡ್ ಶುರುವಾಗಿದ್ದು, ಗ್ರಾಹಕರಂತೂ ಇದನ್ನು ಕೊಂಡುಕೊಳ್ಳಲು ಮುಗಿಬಿದ್ದಿದ್ದಾರೆ. ಮೂರು ಎಳನೀರಿಗೆ ಈ ಒಂದು ಒಣ ಎಳನೀರು ಸಮವಾಗಿದ್ದು, ಸ್ವಲ್ಪ ಪ್ರಮಾಣದ ನೀರು ಇರುವ ಕಾಯಿ ಸೇವಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ.

ನೆರೆಯ ತಮಿಳುನಾಡಿನ ಆಂಬೂರು, ವೆಲ್ಲೂರು ಜಿಲ್ಲೆಗಳಿಂದ ಬರುವ ಈ ಪಣ ಎಳನೀರಿನ ಕಾಯಿಗೆ 40 ರಿಂದ 50 ರೂ ಬೆಲೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಮೈಸೂರಿಗೆ ಬರುತ್ತಿರುವ ವ್ಯಾಪಾರಸ್ಥರು ಒಳ್ಳೆಯ ಲಾಭ ಮಾಡಿಕೊಂಡು ಹಿಂದಿರುಗುತ್ತಿದ್ದಾರೆ.

ಪಣ ಎಳೆ ನೀರನ್ನು ಕೊಂಡು ಸಂತಸ ವ್ಯಕ್ತಪಡಿಸಿದ ಗ್ರಾಹಕರು, ಇದು ಆರೋಗ್ಯಕ್ಕೆ ಬಹಳ ಅನುಕೂಲಕಾರಿ. ರಾಸಾಯನಿಕಯುಕ್ತ ಪಾನೀಯ ಸೇವನೆ ಬದಲು, ಇಂತಹ ಸೀಜನ್ ಫ್ರೂಟ್ಸ್ ಗಳನ್ನ ಸೇವಿಸಬೇಕು. ಆಗ ಮನುಷ್ಯರಿಗೆ ಯಾವುದೇ ರೋಗಗಳು ಬರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

33 mins ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

7 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

7 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

7 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

7 hours ago