ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ.
ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದ ಬಸ್ ತಂಗುದಾಣದ ಬಳಿ ಅವಾಂತರ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಷ್ಟ್ರೀಯ ಹೆದ್ದಾರಿ 766ರ ಮುಖ್ಯ ರಸ್ತೆಯಲ್ಲೇ ಮೊಣಕಾಲುದ್ದ ಗುಂಡಿಯಾಗಿದ್ದು, ಬಸ್ ತಂಗುದಾಣದ ಬಳಿ ರಸ್ತೆಯೂ ಕೆಸರುಮಯವಾಗಿದೆ. ಪರಿಣಾಮ ವಾಹನಗಳ ಸಂಚಾರದ ಸಂದರ್ಭದಲ್ಲಿ ಜನರ ಬಟ್ಟೆಗಳಿಗೆ ಕೆಸರು ಹಾರುತ್ತಿದ್ದು, ವಾಹನ ಸವಾರರು ಹಾಗೂ ಪಾದಾಚಾರಿಗಳಿಗೆ ತೀವ್ರ ಕಿರಿಕಿರಿ ಉಂಟು ಮಾಡಿದೆ.
ಹೈವೇ ರಸ್ತೆಯ ಪರಿಸ್ಥಿತಿ ಈ ರೀತಿಯಾದರೆ ಉಳಿದ ರಸ್ತೆಗಳ ಪರಿಸ್ಥಿತಿ ಹೇಗಿರುತ್ತದೆ.? ಎಂದು ಪ್ರಶ್ನೆ ಮಾಡುತ್ತಿರುವ ಜನತೆ, ಸ್ವಚ್ಛ ನಗರಿ ಎನ್ನುವ ಮೈಸೂರಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…