ಮೈಸೂರು ನಗರ

ಅರಮನೆ ವಶಕ್ಕೆ ಸರ್ಕಾರ ಯತ್ನ: ಹೋರಾಟದ ಎಚ್ಚರಿಕೆ ನೀಡಿದ ಅರಸು ಮಂಡಳಿ

ಮೈಸೂರು: ರಾಜವಂಶಸ್ಥರಿಗೆ ಸೇರಿದ ಬೆಂಗಳೂರು ಅರಮನೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ವಶಕ್ಕೆ ಪಡೆಯಲು ಯತ್ನಿಸುತ್ತಿದೆ. ಆಗೇನಾದರೂ ಆದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸುತ್ತೇವೆ ಎಂದು ಅರಸು ಮಂಡಳಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಅರಸು ಮಂಡಳಿ ಸಂಘದ ಅಧ್ಯಕ್ಷ ಮನೋಜ್‌ ಅರಸು, ನಮ್ಮ ಜನಸಂಖ್ಯೆ ಕಡಿಮೆ ಇದೆ ಎಂದು ಸರ್ಕಾರ ಪದೇ ಪದೇ ನಮ್ಮನ್ನು ಗುರಿಯಾಗಿಸಿಕೊಂಡು ಆಸ್ತಿಯ ಮೇಲೆ ದಾಳಿ ನಡೆಸುತ್ತಿದೆ ಎಂದು ಕಿಡಿಕಾರಿದರು.

ಯಾವುದೇ ಒಂದು ಆಸ್ತಿಯನ್ನು ವಶಪಡಿಸಿಕೊಳ್ಳಬೇಕಾದರೆ ಸೂಕ್ತ ಪರಿಹಾರ ನೀಡಿ ವಶಪಡಿಸಿಕೊಳ್ಳಬೇಕು ಎಂದು ಸಂವಿಧಾನದಲ್ಲಿ ಹೇಳಿದೆ. ಆದರೆ ರಾಜ್ಯ ಸರ್ಕಾರ ಸಂವಿಧಾನವನ್ನು ಪಾಲಿಸದೇ ರಾಜಮನೆತನದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದೆ. ಟಿಡಿಆರ್‌ ನೀಡದೇ ವಶಕ್ಕೆ ಮುಂದಾಗಿರುವುದು ಖಂಡನೀಯ ಎಂದು ಆರೋಪಿಸಿದರು.

ಪ್ರಬಲ ಸಮುದಾಯವಾಗಿದ್ದರೆ ಸರ್ಕಾರ ಈ ರೀತಿ ಮಾಡುತ್ತಿರಲಿಲ್ಲ. ಇವರ ಸಂಖ್ಯೆ ಕಡಿಮೆ ಇದೆ ಎಂದು ಈ ರೀತಿಯ ಧೋರಣೆ ತೋರುತ್ತಿದ್ದಾರೆ. ರಾಜ್ಯಕ್ಕೆ ಮೈಸೂರು ರಾಜರ ಕೊಡುಗೆ ಅಪಾರ. ಅವರು ಮಾಡಿರುವ 50% ಕೆಲಸವನ್ನು ಈಗಿರುವ ಯಾವುದೇ ಸರ್ಕಾರಗಳು ಮಾಡಿಲ್ಲ. ಹಾಗಾಹಿ ಸುಗ್ರೀವಾಜ್ಞೆಯನ್ನು ಸಿಎಂ ಸಿದ್ದರಾಮಯ್ಯ ಅವರು ವಾಪಸ್‌ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

 

AddThis Website Tools
ಆಂದೋಲನ ಡೆಸ್ಕ್

Recent Posts

ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿದ ಯತ್ನಾಳ್‌

ಬೆಂಗಳೂರು: ಯಡಿಯೂರಪ್ಪ ಮುಕ್ತ ಬಿಜೆಪಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಮರ ಸಾರಿದ್ದಾರೆ. ಬಿಜೆಪಿ…

9 mins ago

ಪೋಕ್ಸೋ ಕೇಸ್‌| ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್‌ ರಿಲೀಫ್‌: ‌ಸೆಷನ್ಸ್‌ ಕೋರ್ಟ್‌ ಸಮನ್ಸ್‌ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ಕೋರ್ಟ್‌ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ…

40 mins ago

ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ವಿಚಾರ: ಮೈಸೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ…

52 mins ago

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…

1 hour ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ತಪ್ಪೊಪ್ಪಿಕೊಂಡ ನಟಿ ರನ್ಯಾ ರಾವ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್‌ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…

1 hour ago

ಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆ

ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…

2 hours ago