ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಯ ಹಿಂದೆ ಆರ್ಎಸ್ಎಸ್ನ ಕೈವಾಡಿವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಇಂದು (ಫೆ.13) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್.ಅಶೋಕ್ ಧಮ್ಕಿಗೆ ಹೆದರಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಸುಮಾರು ಒಂದು ಸಾವಿರ ಜನರ ಮೇಲೆ ದೂರು ದಾಖಲು ಆಗಿದೆ. ಹಲವರನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನು ಬಂಧಿಸುತ್ತಾರೆ ಎಂಬ ಮಾಹಿತಿ ಇಲ್ಲ. ಅಲ್ಲಿ ನೆರೆದಿದ್ದ ಪೈಕಿ ಒಂದು ಸಾವಿರ ಜನರು ಇರಲೇ ಇಲ್ಲ ಎಂದು ತಿಳಿಸಿದರು.
ಉದಯಗಿರಿ ಪೊಲೀಸ್ ಠಾಣೆ ಗಲಾಟೆಗೆ ಆರ್ಎಸ್ಎಸ್ನ ಸುರೇಶ್ ಎಂಬಾತ ಕಾರಣ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ಆಗಬೇಕು. ಈ ಸಂಬಂಧ ಕಂಪ್ಲೆಟ್ ನೀಡಲು ಹೋದರೆ, ವಿಪಕ್ಷ ನಾಯಕರು ಪೊಲೀಸರ ಜೊತೆ ಸಭೆ ನಡೆಸುತ್ತಿದ್ದರು. ಪೊಲೀಸ್ ಠಾಣೆಯ ಒಳಗೆ ಸಭೆ ನಡೆಸಲು ಅವಕಾಶ ಇದೆಯಾ, ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದರು.
ಮುಂದುವರಿದು ಮಾತನಾಡುತ್ತಾ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರನ್ನು ಆರ್ಎಸ್ಎಸ್ ಚಡ್ಡಿತೊಳೆಯಲಿಕ್ಕೆ ಇಟ್ಟುಕೊಂಡಿರುವುದು. ಛಲವಾದಿ ನಾರಾಯಣ್ಗೆ ಎಂಎಲ್ಸಿ ಸ್ಥಾನ ನೀಡಿರುವುದೇ ಆರ್ಎಸ್ಎಸ್ ಚಡ್ಡಿ ಹೊತ್ತಾಡಲು ಹಾಗೂ ವಿರೋಧ ಪಕ್ಷದ ನಾಯಕರನ್ನು ಬೈಯ್ಯಲು ಎಂದು ಹೇಳಿದರು.
ಪೊಲೀಸರು ಆರೆಸ್ಟ್ ಮಾಡಿರುವ 15ಜನರ ಪೈಕಿ ಕೆಲವರು ಮುಗ್ದರಿದ್ದಾರೆ. ಪಾರದರರ್ಶಕ ತನಿಖೆ ಆಗೇಕು, ಒನ್ಸೈಡ್ ಆಗಬಾರದು ಎಂದು ಹೇಳಿದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…