ಮೈಸೂರು ನಗರ

ಗಲಾಟೆ ಹಿಂದೆ ಆರ್‌ಎಸ್‌ಎಸ್‌ ಕೈವಾಡ: ಎಂ. ಲಕ್ಷ್ಮಣ್‌

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ನಡೆದ ಗಲಾಟೆಯ ಹಿಂದೆ ಆರ್‌ಎಸ್‌ಎಸ್‌ನ ಕೈವಾಡಿವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಇಂದು (ಫೆ.13) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಧಮ್ಕಿಗೆ ಹೆದರಿ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಸುಮಾರು ಒಂದು ಸಾವಿರ ಜನರ ಮೇಲೆ ದೂರು ದಾಖಲು ಆಗಿದೆ. ಹಲವರನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನು ಬಂಧಿಸುತ್ತಾರೆ ಎಂಬ ಮಾಹಿತಿ ಇಲ್ಲ. ಅಲ್ಲಿ ನೆರೆದಿದ್ದ ಪೈಕಿ ಒಂದು ಸಾವಿರ ಜನರು ಇರಲೇ ಇಲ್ಲ ಎಂದು ತಿಳಿಸಿದರು.

ಉದಯಗಿರಿ ಪೊಲೀಸ್‌ ಠಾಣೆ ಗಲಾಟೆಗೆ ಆರ್‌ಎಸ್‌ಎಸ್‌ನ ಸುರೇಶ್‌ ಎಂಬಾತ ಕಾರಣ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ಆಗಬೇಕು. ಈ ಸಂಬಂಧ ಕಂಪ್ಲೆಟ್‌ ನೀಡಲು ಹೋದರೆ, ವಿಪಕ್ಷ ನಾಯಕರು ಪೊಲೀಸರ ಜೊತೆ ಸಭೆ ನಡೆಸುತ್ತಿದ್ದರು. ಪೊಲೀಸ್‌ ಠಾಣೆಯ ಒಳಗೆ ಸಭೆ ನಡೆಸಲು ಅವಕಾಶ ಇದೆಯಾ, ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದರು.

ಮುಂದುವರಿದು ಮಾತನಾಡುತ್ತಾ, ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಅವರನ್ನು ಆರ್‌ಎಸ್‌ಎಸ್‌ ಚಡ್ಡಿತೊಳೆಯಲಿಕ್ಕೆ ಇಟ್ಟುಕೊಂಡಿರುವುದು. ಛಲವಾದಿ ನಾರಾಯಣ್‌ಗೆ ಎಂಎಲ್‌ಸಿ ಸ್ಥಾನ ನೀಡಿರುವುದೇ ಆರ್‌ಎಸ್‌ಎಸ್‌ ಚಡ್ಡಿ ಹೊತ್ತಾಡಲು ಹಾಗೂ ವಿರೋಧ ಪಕ್ಷದ ನಾಯಕರನ್ನು ಬೈಯ್ಯಲು ಎಂದು ಹೇಳಿದರು.

ಪೊಲೀಸರು ಆರೆಸ್ಟ್‌ ಮಾಡಿರುವ 15ಜನರ ಪೈಕಿ ಕೆಲವರು ಮುಗ್ದರಿದ್ದಾರೆ. ಪಾರದರರ್ಶಕ ತನಿಖೆ ಆಗೇಕು, ಒನ್‌ಸೈಡ್‌ ಆಗಬಾರದು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

11 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

11 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

14 hours ago