ಮೈಸೂರು ನಗರ

ಗಲಾಟೆ ಹಿಂದೆ ಆರ್‌ಎಸ್‌ಎಸ್‌ ಕೈವಾಡ: ಎಂ. ಲಕ್ಷ್ಮಣ್‌

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ನಡೆದ ಗಲಾಟೆಯ ಹಿಂದೆ ಆರ್‌ಎಸ್‌ಎಸ್‌ನ ಕೈವಾಡಿವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಇಂದು (ಫೆ.13) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಧಮ್ಕಿಗೆ ಹೆದರಿ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಸುಮಾರು ಒಂದು ಸಾವಿರ ಜನರ ಮೇಲೆ ದೂರು ದಾಖಲು ಆಗಿದೆ. ಹಲವರನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನು ಬಂಧಿಸುತ್ತಾರೆ ಎಂಬ ಮಾಹಿತಿ ಇಲ್ಲ. ಅಲ್ಲಿ ನೆರೆದಿದ್ದ ಪೈಕಿ ಒಂದು ಸಾವಿರ ಜನರು ಇರಲೇ ಇಲ್ಲ ಎಂದು ತಿಳಿಸಿದರು.

ಉದಯಗಿರಿ ಪೊಲೀಸ್‌ ಠಾಣೆ ಗಲಾಟೆಗೆ ಆರ್‌ಎಸ್‌ಎಸ್‌ನ ಸುರೇಶ್‌ ಎಂಬಾತ ಕಾರಣ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ಆಗಬೇಕು. ಈ ಸಂಬಂಧ ಕಂಪ್ಲೆಟ್‌ ನೀಡಲು ಹೋದರೆ, ವಿಪಕ್ಷ ನಾಯಕರು ಪೊಲೀಸರ ಜೊತೆ ಸಭೆ ನಡೆಸುತ್ತಿದ್ದರು. ಪೊಲೀಸ್‌ ಠಾಣೆಯ ಒಳಗೆ ಸಭೆ ನಡೆಸಲು ಅವಕಾಶ ಇದೆಯಾ, ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದರು.

ಮುಂದುವರಿದು ಮಾತನಾಡುತ್ತಾ, ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಅವರನ್ನು ಆರ್‌ಎಸ್‌ಎಸ್‌ ಚಡ್ಡಿತೊಳೆಯಲಿಕ್ಕೆ ಇಟ್ಟುಕೊಂಡಿರುವುದು. ಛಲವಾದಿ ನಾರಾಯಣ್‌ಗೆ ಎಂಎಲ್‌ಸಿ ಸ್ಥಾನ ನೀಡಿರುವುದೇ ಆರ್‌ಎಸ್‌ಎಸ್‌ ಚಡ್ಡಿ ಹೊತ್ತಾಡಲು ಹಾಗೂ ವಿರೋಧ ಪಕ್ಷದ ನಾಯಕರನ್ನು ಬೈಯ್ಯಲು ಎಂದು ಹೇಳಿದರು.

ಪೊಲೀಸರು ಆರೆಸ್ಟ್‌ ಮಾಡಿರುವ 15ಜನರ ಪೈಕಿ ಕೆಲವರು ಮುಗ್ದರಿದ್ದಾರೆ. ಪಾರದರರ್ಶಕ ತನಿಖೆ ಆಗೇಕು, ಒನ್‌ಸೈಡ್‌ ಆಗಬಾರದು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

5 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

13 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

16 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

17 hours ago