ಮೈಸೂರು ನಗರ

ಲಿಂಗಾಯಿತರಿಂದಲೇ ವಚನ ವಿರೋಧಿ ಕೆಲಸಕ್ಕೆ ಆರ್‌ಎಸ್‌ಎಸ್‌ ಸಂಚು: ಡಾ.ಶಿವಾನಂದ ಜಾಮದಾರ

ಮೈಸೂರು: ಲಿಂಗಾಯತ ಧರ್ಮದ ವಿರುದ್ಧ ಲಿಂಗಾಯತರನ್ನೇ ಎತ್ತಿಕಟ್ಟುವ, ಲಿಂಗಾಯತರಿಂದಲೇ ವಚನ ವಿರೋಧಿ ಕೃತಿಗಳನ್ನು ರಚಿಸುವ ಕೆಲಸಕ್ಕೆ ಆರ್‌ಎಸ್‌ಎಸ್ ಮುಂದಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆರೋಪಿಸಿದರು.

ಜಾಗತಿಕ ಲಿಂಗಾಯಿತ ಮಹಾಸಭಾ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ, ಮೈಸೂರು ನಗರ ಹಾಗೂ ಜಿಲ್ಲೆ ಲಿಂಗಾಯಿತ ಸಾಂಸ್ಕೃತಿಕ ಸಮಿತಿ, ರಾಷ್ಟ್ರೀಯ ಬಸವ ದಳ, ಬಸವ ಕೇಂದ್ರ, ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕ ಇವುಗಳ ಸಹಯೋಗದಲ್ಲಿ ಹೊಸಮಠದ ಆವರಣದಲಿರುವ ನಟರಾಜ ಸಭಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣ ಮತ್ತು ಶರಣರ ವಚನಗಳನ್ನು ವಿರೋಧಿಸಿ ಪುಸ್ತಕ, ಸಿನಿಮಾ ಸೇರಿದಂತೆ ಪ್ರಬಂಧ ಸ್ಪರ್ಧೆಗಳನ್ನು ಆರ್‌ಎಸ್‌ಎಸ್ ಏರ್ಪಡಿಸುತ್ತಿದೆ. ಇವರ ಸುಳ್ಳಿನ ಕಂತೆಗಳನ್ನು ನಾವು ಬಯಲಿಗೆಳೆಯುತ್ತೇವೆ. ಶರಣರ ಕುರಿತಾದ ಸತ್ಯ ದರ್ಶನದ ಆರಂಭದ ಭಾಗವೇ ‘ವಚನ ದರ್ಶನ ಮಿಥ್ಯ ಮತ್ತು ಸತ್ಯ’ ಕೃತಿಯಾಗಿದೆ ಎಂದರು.

ದೇಶದ ಎಲ್ಲಾ ಜನರು ತಮಗೆ ಇಷ್ಟವಾದ ಧರ್ಮ ಅನುಸರಿಸುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಸಂವಿಧಾನದ ಅನುಸಾರವಾಗಿಯೇ ನಾವು ಲಿಂಗಾಯತ ಧರ್ಮವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಎಂದು ತಿಳಿಸಿದರು.

ಬಸವ ಧರ್ಮದ ವಿರುದ್ಧ ಸನಾತನಿಗಳು ಯುದ್ಧ ಸಾರಿದ್ದಾರೆ. ಬಸವಣ್ಣ ಯಾವುದೇ ಧರ್ಮವನ್ನು ಸ್ಥಾಪಿಸಲಿಲ್ಲ, ಬಸವಣ್ಣ ಹಿಂದೂ ಧರ್ಮದ ಸುಧಾರಕ ಮತ್ತು ಪ್ರಚಾರಕರಾಗಿದ್ದರು. ವಚನಗಳು ಉಪನಿಷತ್‌ ಹಾಗೂ ವೇದಾಗಮಗಳ ಭಾಷಾಂತರಗಳಾಗಿವೆ ಎಂದು ಅಪಪ್ರಚಾರ ಮಾಡುತ್ತಾರೆ. ಆಧಾರವೇ ಅಲ್ಲದ ಕಟ್ಟಕಥೆಗಳು, ಸುಳ್ಳುಗಳನ್ನು ಸನಾತನಿಗಳು ಬಿತ್ತರಿಸುತ್ತಿದ್ದಾರೆ ಎಂದು ಅವರು ವಿಷಾದಿಸಿದರು.

ಸಾಹಿತಿ ಡಾ.ಟಿ.ಆರ್.ಚಂದ್ರಶೇಖರ್ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಯಾವುದೇ ಸ್ಥಾನವಾನವಿಲ್ಲ. ಲಿಂಗ ಅಸಮಾನತೆಯ ಪರಮೋಚ್ಛ ಸಿದ್ಧಾಂತ ಚಾತುರ್ವರ್ಣ ಸಿದ್ಧಾಂತವಾಗಿದೆ. ಅಕ್ಕ ಮಹಾದೇವಿ ಸೇರಿದಂತೆ ಅನೇಕ ಮಹಿಳಾ ಶರಣೆಯರು ವಚನಗಳನ್ನು ರಚಿಸುತ್ತಾರೆ. ಆದರೆ ಚಾತುರ್ವರ್ಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಓದುವುದಕ್ಕೆ ಮತ್ತು ಬರೆಯುವುದಕ್ಕೆ ಅವಕಾಶ ಇರಲಿಲ್ಲ ಎಂದು ತಿಳಿಸಿದರು.

ಅಲ್ಲಮಪ್ರಭು ಶೂನ್ಯಪೀಠದ ಶ್ರೀ ಗೌರಿಶಂಕರ ಸ್ವಾಮೀಜಿ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ, ವೀರಶೈವ-ಲಿಂಗಾಯಿತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್ ದೂರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago