ಮೈಸೂರು ನಗರ

ಲಿಂಗಾಯಿತರಿಂದಲೇ ವಚನ ವಿರೋಧಿ ಕೆಲಸಕ್ಕೆ ಆರ್‌ಎಸ್‌ಎಸ್‌ ಸಂಚು: ಡಾ.ಶಿವಾನಂದ ಜಾಮದಾರ

ಮೈಸೂರು: ಲಿಂಗಾಯತ ಧರ್ಮದ ವಿರುದ್ಧ ಲಿಂಗಾಯತರನ್ನೇ ಎತ್ತಿಕಟ್ಟುವ, ಲಿಂಗಾಯತರಿಂದಲೇ ವಚನ ವಿರೋಧಿ ಕೃತಿಗಳನ್ನು ರಚಿಸುವ ಕೆಲಸಕ್ಕೆ ಆರ್‌ಎಸ್‌ಎಸ್ ಮುಂದಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆರೋಪಿಸಿದರು.

ಜಾಗತಿಕ ಲಿಂಗಾಯಿತ ಮಹಾಸಭಾ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ, ಮೈಸೂರು ನಗರ ಹಾಗೂ ಜಿಲ್ಲೆ ಲಿಂಗಾಯಿತ ಸಾಂಸ್ಕೃತಿಕ ಸಮಿತಿ, ರಾಷ್ಟ್ರೀಯ ಬಸವ ದಳ, ಬಸವ ಕೇಂದ್ರ, ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕ ಇವುಗಳ ಸಹಯೋಗದಲ್ಲಿ ಹೊಸಮಠದ ಆವರಣದಲಿರುವ ನಟರಾಜ ಸಭಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣ ಮತ್ತು ಶರಣರ ವಚನಗಳನ್ನು ವಿರೋಧಿಸಿ ಪುಸ್ತಕ, ಸಿನಿಮಾ ಸೇರಿದಂತೆ ಪ್ರಬಂಧ ಸ್ಪರ್ಧೆಗಳನ್ನು ಆರ್‌ಎಸ್‌ಎಸ್ ಏರ್ಪಡಿಸುತ್ತಿದೆ. ಇವರ ಸುಳ್ಳಿನ ಕಂತೆಗಳನ್ನು ನಾವು ಬಯಲಿಗೆಳೆಯುತ್ತೇವೆ. ಶರಣರ ಕುರಿತಾದ ಸತ್ಯ ದರ್ಶನದ ಆರಂಭದ ಭಾಗವೇ ‘ವಚನ ದರ್ಶನ ಮಿಥ್ಯ ಮತ್ತು ಸತ್ಯ’ ಕೃತಿಯಾಗಿದೆ ಎಂದರು.

ದೇಶದ ಎಲ್ಲಾ ಜನರು ತಮಗೆ ಇಷ್ಟವಾದ ಧರ್ಮ ಅನುಸರಿಸುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಸಂವಿಧಾನದ ಅನುಸಾರವಾಗಿಯೇ ನಾವು ಲಿಂಗಾಯತ ಧರ್ಮವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಎಂದು ತಿಳಿಸಿದರು.

ಬಸವ ಧರ್ಮದ ವಿರುದ್ಧ ಸನಾತನಿಗಳು ಯುದ್ಧ ಸಾರಿದ್ದಾರೆ. ಬಸವಣ್ಣ ಯಾವುದೇ ಧರ್ಮವನ್ನು ಸ್ಥಾಪಿಸಲಿಲ್ಲ, ಬಸವಣ್ಣ ಹಿಂದೂ ಧರ್ಮದ ಸುಧಾರಕ ಮತ್ತು ಪ್ರಚಾರಕರಾಗಿದ್ದರು. ವಚನಗಳು ಉಪನಿಷತ್‌ ಹಾಗೂ ವೇದಾಗಮಗಳ ಭಾಷಾಂತರಗಳಾಗಿವೆ ಎಂದು ಅಪಪ್ರಚಾರ ಮಾಡುತ್ತಾರೆ. ಆಧಾರವೇ ಅಲ್ಲದ ಕಟ್ಟಕಥೆಗಳು, ಸುಳ್ಳುಗಳನ್ನು ಸನಾತನಿಗಳು ಬಿತ್ತರಿಸುತ್ತಿದ್ದಾರೆ ಎಂದು ಅವರು ವಿಷಾದಿಸಿದರು.

ಸಾಹಿತಿ ಡಾ.ಟಿ.ಆರ್.ಚಂದ್ರಶೇಖರ್ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಯಾವುದೇ ಸ್ಥಾನವಾನವಿಲ್ಲ. ಲಿಂಗ ಅಸಮಾನತೆಯ ಪರಮೋಚ್ಛ ಸಿದ್ಧಾಂತ ಚಾತುರ್ವರ್ಣ ಸಿದ್ಧಾಂತವಾಗಿದೆ. ಅಕ್ಕ ಮಹಾದೇವಿ ಸೇರಿದಂತೆ ಅನೇಕ ಮಹಿಳಾ ಶರಣೆಯರು ವಚನಗಳನ್ನು ರಚಿಸುತ್ತಾರೆ. ಆದರೆ ಚಾತುರ್ವರ್ಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಓದುವುದಕ್ಕೆ ಮತ್ತು ಬರೆಯುವುದಕ್ಕೆ ಅವಕಾಶ ಇರಲಿಲ್ಲ ಎಂದು ತಿಳಿಸಿದರು.

ಅಲ್ಲಮಪ್ರಭು ಶೂನ್ಯಪೀಠದ ಶ್ರೀ ಗೌರಿಶಂಕರ ಸ್ವಾಮೀಜಿ, ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ, ವೀರಶೈವ-ಲಿಂಗಾಯಿತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್ ದೂರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

10 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

10 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

11 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

11 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

11 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

13 hours ago