ಮೈಸೂರು ನಗರ

RSSನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.

ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

ಇದನ್ನು ಓದಿ: ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣಕ್ಕೆ ಸಚಿವ ಎಚ್‌ಸಿಎಂ ಗುದ್ದಲಿಪೂಜೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು, ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago