ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಕಾರಣ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್ನಿಂದ ದೂರ ಉಳಿದಿರುವುದೇ ಆಗಿದೆ.
ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪರ್ಧೆ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಚುನಾವಣೆ ಬಂದಾಗ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜೆಡಿಎಸ್ನಲ್ಲಿ ಇದ್ದೇನೆ. ಜೆಡಿಎಸ್ನಿಂದ ಒಂದು ಹೆಜ್ಜೆ ಹೊರ ತೆಗೆದಿಲ್ಲ. ಕೆಲ ವಿಚಾರದಲ್ಲಿ ನೋವಾಗಿದೆ. ಈ ಬಗ್ಗೆ ನಾಯಕರಿಗೂ ಗೊತ್ತಿದೆ. ನನಗೆ ನೋವಾಗಿದೆ ಎಂದು ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್ ವಿರುದ್ಧವಾಗಿ ನಾನೂ ಯಾವತ್ತೂ ಮಾತಾಡಿಲ್ಲ. ಒಳ್ಳೆಯ ದಿನ ಬರುತ್ತದೆ. ಎಲ್ಲವೂ ಸರಿ ಹೋಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…