Sa Ra Mahesh
ಮೈಸೂರು: ಕಳೆದ 15 ವರ್ಷದಿಂದ ಕೆ.ಆರ್.ನಗರ ಹಾಳಾಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಸೋತಿದ್ದು, ಜನ ನನಗೆ ರೆಸ್ಟ್ ಕೊಟ್ಟಿದ್ದಾರೆ. ಮೊನ್ನೆ ಕೆ.ಆರ್.ನಗರಕ್ಕೆ ಸಿಎಂ ಹೋಗಿದ್ದ ವೇಳೆ ಈ ಮಾತು ಹೇಳಿ ಹೋಗಿದ್ದಾರೆ. ಅದಕ್ಕೂ ಹಿಂದೆ ಸಾರಾ ಮಹೇಶ್ ಪಾಪದ ಕೊಡ ತುಂಬಿದೆ ಅಂದ್ರು. ಸೋತವರ ಪಾಪದ ಕೊಡ ತುಂಬಿದೆ ಅಂದ್ರೆ, ಸಿದ್ದರಾಮಯ್ಯ ಎಷ್ಟು ಬಾರಿ ಸೋತಿದ್ದಾರೆ? ಅವರದ್ದು ಪಾಪದ ಕೊಡ ತುಂಬಿದ್ಯಾ? ಎಂದು ಪ್ರಶ್ನೆ ಮಾಡಿದರು.
ಕೆ.ಆರ್.ನಗರದಲ್ಲಿ ನಾನು ತಂದ ಯೋಜನೆಗಳಿಗೆ ಉದ್ಘಾಟನೆ ಮಾಡಿ ಹೋಗಿದ್ದಾರೆ. ಈ ಹಿಂದೆ 175 ಕೋಟಿ ಅನುದಾನ ತಂದಿದ್ದೇ ನಾನು. ಆ ಎಲ್ಲಾ ಕಾರ್ಯಕ್ರಮಗಳಿಗೆ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಈ ರಾಜ್ಯ ಹಾಳು ಮಾಡುತ್ತಿರುವವರು ಯಾರು ಎಂದು ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ಎಲ್ಲದರ ಬೆಲೆ ಏರಿಕೆ ಆಗಿದೆ. ಡೀಸೆಲ್, ಪೆಟ್ರೋಲ್, ಲಿಕ್ಕರ್ ವೆಹಿಕಲ್, ಪ್ರಾಪರ್ಟಿ ಟ್ಯಾಕ್ಸ್, ವಾಟರ್ ಬಿಲ್ ಎಲ್ಲವೂ ಕೂಡ ಜಾಸ್ತಿ ಆಗಿದೆ. ಹಾಲಿನಿಂದ ಹಾಲ್ಕೋ ಹಾಲ್ ತನಕ ಜಾಸ್ತಿ ಮಾಡಿದ್ದೇ ಸಿದ್ದರಾಮಯ್ಯ ಎಂದು ಕಿಡಿಕಾರಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…