ಮೈಸೂರು ನಗರ

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ, ಗೇಟ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಒಕ್ಕೂಟದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಅರಣ್ಯಸಚಿವ ಈಶ್ವರ್ ಖಂಡ್ರೆ ವಿಧಾನಸೌಧದಲ್ಲಿ ಹಂತ ಹಂತವಾಗಿ ಬಂಡೀಪುರ, ನಾಗರಹೊಳೆ ವ್ಯಾಪ್ತಿಯಲ್ಲಿ ಹಗಲು ವೇಳೆ ಸಫಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಸಚಿವರ ಈ ನಿರ್ಧಾರ ರೈತರು, ಪ್ರಾಣಿಗಳು ಹಾಗೂ ಅರಣ್ಯವಿರೋಽಯಾಗಿದೆ. ಸಾರ್ವಜನಿಕರ ಪ್ರಾಣದೊಂದಿಗೆ ಚೆಲ್ಲಾಟ ಆಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕೇವಲ ಬಂಡವಾಳಶಾಹಿಗಳು, ಶ್ರೀಮಂತರು ಕಾಡಿನೊಳಗೆ ಮೋಜು-ಮಸ್ತಿ ಮಾಡಲು ಅವಕಾಶ ಕಲ್ಪಿಸಿರುವುದು ಸರಿಯಲ್ಲ. ಈ ಹಣದಿಂದ ಸರ್ಕಾರ ನಡೆಸುವ ದರಿದ್ರ ರಾಜ್ಯಸರ್ಕಾರಕ್ಕೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದರು.

ರೈತರ ಮಕ್ಕಳ ಸಮಾಧಿ ಮೇಲೆ ಗ್ಯಾರಂಟಿ ಯೋಜನೆಗೆ ಹಣ ಒದಗಿಸಲು ಸರ್ಕಾರ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ. ಸಚಿವರು, ಶಾಸಕರು, ಸಂಸದರು ಕಾಡಿನಲ್ಲಿ ವಾಸ ಮಾಡುತ್ತಿಲ್ಲ, ಕಾಡಂಚಿನಲ್ಲೂ ವ್ಯವಸಾಯ ಮಾಡುತ್ತಿಲ್ಲ. ಕೇವಲ ಕಾಡನ್ನು ನೋಡಿ ಮನೆ ಸೇರುತ್ತಾರೆ. ಕಾಡಂಚಿನ ಪ್ರದೇಶದಲ್ಲಿರುವ ರೈತರು, ಅವರ ಮಕ್ಕಳು ಸಫಾರಿಯಿಂದ ನೊಂದ ಪ್ರಾಣಿಗಳ ಆಕ್ರೋಶಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಫಾರಿ ಬಂದ್ ಆದ ಮೇಲೆ ಯಾವುದೇ ಮಾನವ-ಪ್ರಾಣಿ ಸಂಘರ್ಷ ವರದಿಯಾಗಿಲ್ಲ. ಸಫಾರಿಯಿಂದ ಕಾಡಿನಲ್ಲಿ ವಾಸ ಮಾಡುವ ಪ್ರಾಣಿಗಳ ವೈವಿಧ್ಯತೆಗೆ ತೊಂದರೆ ಉಂಟಾಗುತ್ತದೆ. ಸ್ಥಳೀಯ ರೈತರೊಂದಿಗೆ ಚರ್ಚಿಸದೆ ಈ ನಿರ್ಧಾರ ತೆಗೆದುಕೊಂಡಿರುವುದು ರೈತ ವಿರೋಧಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಡಿಸಿಎಫ್ ಪರಮೇಶ್ ಅವರಿಗೆ ಹಕ್ಕೋತ್ತಾಯ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜ್ಯಖಜಾಂಚಿ ಕೆರೆಹುಂಡಿ ರಾಜಣ್ಣ, ಸಂಚಾಲಕ ಹನುಮಯ್ಯ, ಜಿಲ್ಲಾ ಕಾರ್ಯದರ್ಶಿ ಮಲಿಯೂರು ಮಹೇಂದ್ರ, ಪ್ರಕಾಶ್ ಗಾಂಧಿ, ಎಚ್.ಗುಂಡ್ಲ ಚಿದಂಬರ್, ಮುದ್ದಳ್ಳಿ ಮಧು, ಅಂಡುವಿನಹಳ್ಳಿ ಜಗದೀಶ್, ಮಹೇಶ್, ದೇವಣ್ಣ, ಚೇತನ್, ನವೀನ, ಬಸವಣ್ಣ, ಮಂಜು, ಮುಳ್ಳೂರು ಕುಮಾರ್ ನಾಯಕ, ಜಗದೀಶ್, ಮಹದೇವಸ್ವಾಮಿ, ಗಣೇಶ, ಧರ್ಮೇಂದ್ರ, ಮಂಜುನಾಥ ಸೇರಿದಂತೆ ಹಲವರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago