ಮೈಸೂರು ನಗರ

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ, ಗೇಟ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಒಕ್ಕೂಟದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಅರಣ್ಯಸಚಿವ ಈಶ್ವರ್ ಖಂಡ್ರೆ ವಿಧಾನಸೌಧದಲ್ಲಿ ಹಂತ ಹಂತವಾಗಿ ಬಂಡೀಪುರ, ನಾಗರಹೊಳೆ ವ್ಯಾಪ್ತಿಯಲ್ಲಿ ಹಗಲು ವೇಳೆ ಸಫಾರಿ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಸಚಿವರ ಈ ನಿರ್ಧಾರ ರೈತರು, ಪ್ರಾಣಿಗಳು ಹಾಗೂ ಅರಣ್ಯವಿರೋಽಯಾಗಿದೆ. ಸಾರ್ವಜನಿಕರ ಪ್ರಾಣದೊಂದಿಗೆ ಚೆಲ್ಲಾಟ ಆಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕೇವಲ ಬಂಡವಾಳಶಾಹಿಗಳು, ಶ್ರೀಮಂತರು ಕಾಡಿನೊಳಗೆ ಮೋಜು-ಮಸ್ತಿ ಮಾಡಲು ಅವಕಾಶ ಕಲ್ಪಿಸಿರುವುದು ಸರಿಯಲ್ಲ. ಈ ಹಣದಿಂದ ಸರ್ಕಾರ ನಡೆಸುವ ದರಿದ್ರ ರಾಜ್ಯಸರ್ಕಾರಕ್ಕೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದರು.

ರೈತರ ಮಕ್ಕಳ ಸಮಾಧಿ ಮೇಲೆ ಗ್ಯಾರಂಟಿ ಯೋಜನೆಗೆ ಹಣ ಒದಗಿಸಲು ಸರ್ಕಾರ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ. ಸಚಿವರು, ಶಾಸಕರು, ಸಂಸದರು ಕಾಡಿನಲ್ಲಿ ವಾಸ ಮಾಡುತ್ತಿಲ್ಲ, ಕಾಡಂಚಿನಲ್ಲೂ ವ್ಯವಸಾಯ ಮಾಡುತ್ತಿಲ್ಲ. ಕೇವಲ ಕಾಡನ್ನು ನೋಡಿ ಮನೆ ಸೇರುತ್ತಾರೆ. ಕಾಡಂಚಿನ ಪ್ರದೇಶದಲ್ಲಿರುವ ರೈತರು, ಅವರ ಮಕ್ಕಳು ಸಫಾರಿಯಿಂದ ನೊಂದ ಪ್ರಾಣಿಗಳ ಆಕ್ರೋಶಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಫಾರಿ ಬಂದ್ ಆದ ಮೇಲೆ ಯಾವುದೇ ಮಾನವ-ಪ್ರಾಣಿ ಸಂಘರ್ಷ ವರದಿಯಾಗಿಲ್ಲ. ಸಫಾರಿಯಿಂದ ಕಾಡಿನಲ್ಲಿ ವಾಸ ಮಾಡುವ ಪ್ರಾಣಿಗಳ ವೈವಿಧ್ಯತೆಗೆ ತೊಂದರೆ ಉಂಟಾಗುತ್ತದೆ. ಸ್ಥಳೀಯ ರೈತರೊಂದಿಗೆ ಚರ್ಚಿಸದೆ ಈ ನಿರ್ಧಾರ ತೆಗೆದುಕೊಂಡಿರುವುದು ರೈತ ವಿರೋಧಿ ಧೋರಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಡಿಸಿಎಫ್ ಪರಮೇಶ್ ಅವರಿಗೆ ಹಕ್ಕೋತ್ತಾಯ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜ್ಯಖಜಾಂಚಿ ಕೆರೆಹುಂಡಿ ರಾಜಣ್ಣ, ಸಂಚಾಲಕ ಹನುಮಯ್ಯ, ಜಿಲ್ಲಾ ಕಾರ್ಯದರ್ಶಿ ಮಲಿಯೂರು ಮಹೇಂದ್ರ, ಪ್ರಕಾಶ್ ಗಾಂಧಿ, ಎಚ್.ಗುಂಡ್ಲ ಚಿದಂಬರ್, ಮುದ್ದಳ್ಳಿ ಮಧು, ಅಂಡುವಿನಹಳ್ಳಿ ಜಗದೀಶ್, ಮಹೇಶ್, ದೇವಣ್ಣ, ಚೇತನ್, ನವೀನ, ಬಸವಣ್ಣ, ಮಂಜು, ಮುಳ್ಳೂರು ಕುಮಾರ್ ನಾಯಕ, ಜಗದೀಶ್, ಮಹದೇವಸ್ವಾಮಿ, ಗಣೇಶ, ಧರ್ಮೇಂದ್ರ, ಮಂಜುನಾಥ ಸೇರಿದಂತೆ ಹಲವರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago