ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಪಿ.ಎನ್. ಗಣೇಶ್ಕುಮಾರ್ ತಿಳಿಸಿದರು.
ನಗರದಲ್ಲಿ ಅವರು ಸುದ್ದಿಗಾರರೊಡನೆ ಮಾತನಾಡಿ, ಮೈಸೂರು ಜಿಲ್ಲಾ ಯೋಗ ಸ್ಪೋರ್ಟ್ಸ್ ಫೌಂಡೇಶನ್, ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮ, ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಗ್ಲೋಬಲ್ ಯೋಗ ಪೋರ್ ಸಂಯುಕ್ತಾಶ್ರಯದಲ್ಲಿ 35ನೇ ರಥಸಪ್ತಮಿ ಅಂಗವಾಗಿ ವಿವೇಕಾನಂದ ಜಯಂತಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಟಿ.ಎಸ್. ಶ್ರೀವತ್ಸ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡ ಸಿದ್ದರಾಜು, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ ಮೈಸೂರು ಪ್ರಾಂಶುಪಾಲ ಶ್ರೀವತ್ಸ, ಗ್ಲೋಬಲ್ ಯೋಗ ಫಾರಂ ಅಧ್ಯಕ್ಷ ಶ್ರೀಹರಿ, ಖಜಾಂಚಿ ಶಶಿಕುಮಾರ್, ನಿವೃತ್ತ ಡಿವೈಎಸ್ಪಿ ಉಮೇಶ್ ಗಣಪತಿ ಭಟ್, ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಮಂಜುಳಾ ಇನ್ನಿತರರು ಆಗಮಿಸಲಿದ್ದಾರೆ. ಇದು ಸಂಪೂರ್ಣ ಉಚಿತ ಕಾರ್ಯಕ್ರಮವಾಗಿದ್ದು, ಆಗಮಿಸುವವರು ಬಿಳಿ ಬಣ್ಣದ ಉಡುಪು ಧರಿಸಬೇಕು ಹಾಗೂ ತಾವೇ ಮ್ಯಾಟ್ ತರಬೇಕು ಎಂದು ಮನವಿ ಮಾಡಿದರು.
ಅಲ್ಲದೇ ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆ, ಯೋಗ ಚರ್ಚಾ ಸ್ಪರ್ಧೆ, ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದರವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ ಹಾಗೂ 108 ಸಾಮೂಹಿಕ ಸೂರ್ಯ ನಮಸ್ಕಾರದಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುತ್ತೆ ಎಂದು ತಿಳಿಸಿದರು.
ನಿವೃತ್ತ ಡಿಡಿಪಿಐ ಮಂಜುಳಾ, ಶಶಿಕುಮಾರ್, ವಿವೇಕ್, ನಿಶಾಂತ್, ಪ್ರೇಮ್ಕುಮಾರ್ ಇದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…