ಮೈಸೂರು ನಗರ

ಕೆಆರ್‌ಎಸ್‌ ರಸ್ತೆ ವಿವಾದ: ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ-ಸಂದೇಶ್‌ ಸ್ವಾಮಿ

ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ ಎಂದು ಮಾಜಿ ಮಹಾಪೌರ ಸಂದೇಶ್ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್‌.31) ಕೆಆರ್‌ಎಸ್‌ ರಸ್ತೆಯ ವಿಚಾರವಾಗಿ ಪರ-ವಿರೋಧ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುವ ಗಣ್ಯರ ಹೆಸರನ್ನು ರಸ್ತೆ, ಉದ್ಯಾನವನ, ವೃತ್ತಗಳಿಗೆ ನಾಮಕರಣ ಮಾಡುವ ಸಂಪ್ರದಾಯವಿದೆ. ಆದರೆ, ಈ ಪ್ರಕ್ರಿಯೆ ನಿಯಮ ಬದ್ಧವಾಗಿಯೇ ನಡೆಯಬೇಕು. ನಾಮಕರಣ ಸಂಬಂಧ ಪಾಲಿಕೆ ನಾಮಕರಣ ಸಮಿತಿ ಮೂಲಕ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆ ನಂತರ
ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಬೇಕು. ಅದನ್ನು ಪಾಲಿಕೆ ಕೌನ್ಸಿಲ್‌ನಲ್ಲಿ ನಿರ್ಣಯಿಸಿ ಸರ್ಕಾರಕ್ಕೆ ಕಳುಹಿಸಬೇಕು. ಆದರೆ, ಈ ಯಾವುದೇ ಪ್ರಕ್ರಿಯೆ ನಡೆಯದೆ ಅಧಿಕಾರಿಗಳು ಏಕಾಏಕಿ ಯಾವುದೇ ನಾಮಕರಣ ಮಾಡಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಅಂದಿನ ಕಾಲದಲ್ಲಿ ಅಂದರೆ ಸುಮಾರು 1921ರಲ್ಲಿ ಅಂದಿನ ಸಿಟಿ ಇಂಪ್ರೂವ್‌ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಈಗಿನ ಮಾಂಡೋವಿ ಮೋಟಾರ್ಸ್‌ನಿಂದ ಪಿ.ಕೆ.ಸ್ಯಾನಿಟೋರಿಯಂ ಆಸ್ಪತ್ರೆವರೆಗಿನ ರಸ್ತೆಗೆ ‘ಪ್ರಿನ್ಸ್‌ಸ್ ರಸ್ತೆ’ ಎಂದು ನಾಮಕರಣ ಮಾಡಿದೆ ಎಂದು ಅಂದಿನ ನಕ್ಷೆಯಲ್ಲಿ ಈ ಬಗ್ಗೆ ಉಲ್ಲೇಖ ಇರುವುದನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ ಅರಮನೆ ಬಳಿಯ ಕರ್ಜನ್ ಪಾರ್ಕ್‌ಗೆ ಡಾ.ರಾಜ್‌ಕುಮಾರ್ ಉದ್ಯಾನವನ ಎಂದು ನಾಮಕರಣ ಮಾಡಲು ಪಾಲಿಕೆ ಕೌನ್ಸಿಲ್‌ನಲ್ಲಿ ನಿರ್ಣಯ ಕೈಗೊಂಡು ಸರ್ಕಾರದ ಅನುಮತಿ ಪಡೆದು ನಾಮಕರಣ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಇನ್ನೂ ತಾವು ಮಹಾಪೌರರಾಗಿದ್ದ ಅವಧಿಯಲ್ಲಿ ಸಾರ್ವಜನಿಕರ ಮನವಿ ಮೇರೆಗೆ ಜೆ.ಪಿ.ನಗರದ ದೊಡ್ಡ ಉದ್ಯಾನವನಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಒಂದು ಕಡೆ ನಾಮಕರಣ ಮಾಡಿರುವ ವ್ಯಕ್ತಿಯ ಹೆಸರನ್ನು ಮತ್ತೊಂದು ಕಡೆ ನಾಮಕರಣ ಮಾಡಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ. ಅಧಿಕಾರಿಗಳು ಮಾಡುತ್ತಿರುವ ಈ ಕೆಲಸ ಜಾತಿ ಸಂಘರ್ಷಕ್ಕೆ ಕಾರಣವಾಗಲಿದೆ. ಮೊದಲು ಅಧಿಕಾರಿಗಳು ಮೈಸೂರಿನ ಇತಿಹಾಸ ತಿಳಿದುಕೊಳ್ಳಲಿ. ಬಳಿಕ ಕೆಆರ್‌ಎಸ್‌ ರಸ್ತೆಗೆ ಮರು ನಾಮಕರಣ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿ. ಅದನ್ನು ಬಿಟ್ಟು ಗೊಂದಲ ಸೃಷ್ಟಿಸಬಾರದು, ಸಿಎಂ ಸಿದ್ದರಾಮಯ್ಯ ಈ ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಹೆಗ್ಗಳಿಕೆಗೆ ಪಾತ್ರವಾಗಿರುವ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವುದು ಸರಿಯಲ್ಲ. ಅವರ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

17 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

57 mins ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

1 hour ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

1 hour ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

2 hours ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

3 hours ago