ಮೈಸೂರು ನಗರ

ಕೆಆರ್‌ಎಸ್‌ ರಸ್ತೆ ವಿವಾದ: ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ-ಸಂದೇಶ್‌ ಸ್ವಾಮಿ

ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ ಎಂದು ಮಾಜಿ ಮಹಾಪೌರ ಸಂದೇಶ್ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಇಂದು(ಡಿಸೆಂಬರ್‌.31) ಕೆಆರ್‌ಎಸ್‌ ರಸ್ತೆಯ ವಿಚಾರವಾಗಿ ಪರ-ವಿರೋಧ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುವ ಗಣ್ಯರ ಹೆಸರನ್ನು ರಸ್ತೆ, ಉದ್ಯಾನವನ, ವೃತ್ತಗಳಿಗೆ ನಾಮಕರಣ ಮಾಡುವ ಸಂಪ್ರದಾಯವಿದೆ. ಆದರೆ, ಈ ಪ್ರಕ್ರಿಯೆ ನಿಯಮ ಬದ್ಧವಾಗಿಯೇ ನಡೆಯಬೇಕು. ನಾಮಕರಣ ಸಂಬಂಧ ಪಾಲಿಕೆ ನಾಮಕರಣ ಸಮಿತಿ ಮೂಲಕ ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಆ ನಂತರ
ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಬೇಕು. ಅದನ್ನು ಪಾಲಿಕೆ ಕೌನ್ಸಿಲ್‌ನಲ್ಲಿ ನಿರ್ಣಯಿಸಿ ಸರ್ಕಾರಕ್ಕೆ ಕಳುಹಿಸಬೇಕು. ಆದರೆ, ಈ ಯಾವುದೇ ಪ್ರಕ್ರಿಯೆ ನಡೆಯದೆ ಅಧಿಕಾರಿಗಳು ಏಕಾಏಕಿ ಯಾವುದೇ ನಾಮಕರಣ ಮಾಡಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಅಂದಿನ ಕಾಲದಲ್ಲಿ ಅಂದರೆ ಸುಮಾರು 1921ರಲ್ಲಿ ಅಂದಿನ ಸಿಟಿ ಇಂಪ್ರೂವ್‌ಮೆಂಟ್ ಟ್ರಸ್ಟ್ ಬೋರ್ಡ್ (ಸಿಐಟಿಬಿ) ಈಗಿನ ಮಾಂಡೋವಿ ಮೋಟಾರ್ಸ್‌ನಿಂದ ಪಿ.ಕೆ.ಸ್ಯಾನಿಟೋರಿಯಂ ಆಸ್ಪತ್ರೆವರೆಗಿನ ರಸ್ತೆಗೆ ‘ಪ್ರಿನ್ಸ್‌ಸ್ ರಸ್ತೆ’ ಎಂದು ನಾಮಕರಣ ಮಾಡಿದೆ ಎಂದು ಅಂದಿನ ನಕ್ಷೆಯಲ್ಲಿ ಈ ಬಗ್ಗೆ ಉಲ್ಲೇಖ ಇರುವುದನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ ಅರಮನೆ ಬಳಿಯ ಕರ್ಜನ್ ಪಾರ್ಕ್‌ಗೆ ಡಾ.ರಾಜ್‌ಕುಮಾರ್ ಉದ್ಯಾನವನ ಎಂದು ನಾಮಕರಣ ಮಾಡಲು ಪಾಲಿಕೆ ಕೌನ್ಸಿಲ್‌ನಲ್ಲಿ ನಿರ್ಣಯ ಕೈಗೊಂಡು ಸರ್ಕಾರದ ಅನುಮತಿ ಪಡೆದು ನಾಮಕರಣ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಇನ್ನೂ ತಾವು ಮಹಾಪೌರರಾಗಿದ್ದ ಅವಧಿಯಲ್ಲಿ ಸಾರ್ವಜನಿಕರ ಮನವಿ ಮೇರೆಗೆ ಜೆ.ಪಿ.ನಗರದ ದೊಡ್ಡ ಉದ್ಯಾನವನಕ್ಕೆ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಒಂದು ಕಡೆ ನಾಮಕರಣ ಮಾಡಿರುವ ವ್ಯಕ್ತಿಯ ಹೆಸರನ್ನು ಮತ್ತೊಂದು ಕಡೆ ನಾಮಕರಣ ಮಾಡಲು ನಿಯಮದಲ್ಲಿ ಅವಕಾಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಓಲೈಸಲು ಅಧಿಕಾರಿಗಳು ಈ ಪ್ರಸ್ತಾವನೆ ಇರಿಸಿರುವುದು ಸರಿಯಲ್ಲ. ಅಧಿಕಾರಿಗಳು ಮಾಡುತ್ತಿರುವ ಈ ಕೆಲಸ ಜಾತಿ ಸಂಘರ್ಷಕ್ಕೆ ಕಾರಣವಾಗಲಿದೆ. ಮೊದಲು ಅಧಿಕಾರಿಗಳು ಮೈಸೂರಿನ ಇತಿಹಾಸ ತಿಳಿದುಕೊಳ್ಳಲಿ. ಬಳಿಕ ಕೆಆರ್‌ಎಸ್‌ ರಸ್ತೆಗೆ ಮರು ನಾಮಕರಣ ವಿಚಾರವಾಗಿ ನಿರ್ಧಾರ ಕೈಗೊಳ್ಳಲಿ. ಅದನ್ನು ಬಿಟ್ಟು ಗೊಂದಲ ಸೃಷ್ಟಿಸಬಾರದು, ಸಿಎಂ ಸಿದ್ದರಾಮಯ್ಯ ಈ ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಹೆಗ್ಗಳಿಕೆಗೆ ಪಾತ್ರವಾಗಿರುವ ಸಿದ್ದರಾಮಯ್ಯ ಅವರಿಗೆ ಮುಜುಗರ ತರುವುದು ಸರಿಯಲ್ಲ. ಅವರ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

54 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago