ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ “ಸಂಸ್ಕೃತ ಆಪಣ ಪ್ರದರ್ಶಿನಿ” ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ ಎಂದರೆ ಸಂಸ್ಕೃತದಲ್ಲಿ ವ್ಯಾಪಾರ ಮಳಿಗೆ ಎಂದು ಅರ್ಥ. ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ದಿನನಿತ್ಯ ಬಳಸುವ ಹಣ್ಣು, ತರಕಾರಿ, ದಿನಸಿ ಪದಾರ್ಥಗಳ ಸಂಸ್ಕೃತ ಹೆಸರನ್ನು ಪರಿಚಯಿಸುವ ದೃಷ್ಟಿಯಿಂದ ವ್ಯಾಪಾರ ಮಳೆಗೆಯನ್ನು ನಿರ್ಮಿಸಿ ಅಲ್ಲಿ ಪ್ರತಿಯೊಂದು ಪದಾರ್ಥಗಳಿಗೆ ಸಂಸ್ಕೃತ ಹೆಸರನ್ನು ಫಲಕಗಳಲ್ಲಿ ಬರೆದು ಪ್ರದರ್ಶನ ಮಾಡಿ ಜನರಿಗೆ ಅರಿವು ಮೂಡಿಸಿರುವುದು ಮಾದರಿ ಕಾರ್ಯ ಎಂದರು.
ಸಂಸ್ಕೃತ ನಮ್ಮ ಅಖಂಡ ಭಾತರ ನೆಲದ ಮೂಲ ಭಾಷೆ. ಸಂಸ್ಕೃತ ವಿಶ್ವದ ಬಹುತೇಕ ಭಾಷೆಗಳ ಜನನಿ. ಗಣಕ ಯಂತ್ರಕ್ಕೆ ಆಂಗ್ಲಭಾಷೆಗಿಂತಲೂ ಅತಿ ಹೆಚ್ಚಿನ ರೀತಿಯಲ್ಲಿ ಹೊಂದುವ ಮಹತ್ವ ಪಡೆದ ಭಾಷೆ.ಇದನ್ನು ಸಾಮಾನ್ಯ ಜನರಿಗೂ ಪರಿಚಯಿಸುವುದು ಇಂದು ಅನಿವಾರ್ಯ ಮತ್ತು ನಮ್ಮ ಕರ್ತವ್ಯ ವಾಗಿದೆ ಎಂದು ಡಾ. ಪ್ಯಾಟಿ ನುಡಿದರು.
ವಿದ್ಯಾಪೀಠದ ೧೫ ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ವಿವಿಧ ಮಳಿಗೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಗಮನ ಸೆಳೆಯಿತು.
ಬಹುಮಾನ: ಪ್ರದರ್ಶನವನ್ನು ನೋಡಿ ಐದು ಪದಾರ್ಥದ ಸಂಸ್ಕೃತದ ಹೆಸರನ್ನು ಹೇಳಿದ ಸಾರ್ವಜನಿಕರಿಗೆ ವಿಶೇಷ ಬಹುಮಾನವನ್ನು ಕೊಡಲಾಯಿತು. ಅನೇಕ ಜನರು ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಹೆಸರುಗಳನ್ನು ಕೇಳಿ, ಉಚ್ಚಾರಣೆ ಮಾಡಿ, ಅರ್ಥ ತಿಳಿದು ಸಂಭ್ರಮಿಸಿದರು.
ಧಾಮದಲ್ಲಿ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಮಕ್ಕಳು ಆಪಣ ಪ್ರದರ್ಶಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಡಾ. ಶ್ರೀ ನಿಧಿ ಪ್ಯಾಟಿ ನೇತೃತ್ವ ವಹಿಸಿದ್ದರು.
ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ…
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್ಗೆ…
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200…
ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24…
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು…
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ…