ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ “ಸಂಸ್ಕೃತ ಆಪಣ ಪ್ರದರ್ಶಿನಿ” ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ ಎಂದರೆ ಸಂಸ್ಕೃತದಲ್ಲಿ ವ್ಯಾಪಾರ ಮಳಿಗೆ ಎಂದು ಅರ್ಥ. ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ದಿನನಿತ್ಯ ಬಳಸುವ ಹಣ್ಣು, ತರಕಾರಿ, ದಿನಸಿ ಪದಾರ್ಥಗಳ ಸಂಸ್ಕೃತ ಹೆಸರನ್ನು ಪರಿಚಯಿಸುವ ದೃಷ್ಟಿಯಿಂದ ವ್ಯಾಪಾರ ಮಳೆಗೆಯನ್ನು ನಿರ್ಮಿಸಿ ಅಲ್ಲಿ ಪ್ರತಿಯೊಂದು ಪದಾರ್ಥಗಳಿಗೆ ಸಂಸ್ಕೃತ ಹೆಸರನ್ನು ಫಲಕಗಳಲ್ಲಿ ಬರೆದು ಪ್ರದರ್ಶನ ಮಾಡಿ ಜನರಿಗೆ ಅರಿವು ಮೂಡಿಸಿರುವುದು ಮಾದರಿ ಕಾರ್ಯ ಎಂದರು.
ಸಂಸ್ಕೃತ ನಮ್ಮ ಅಖಂಡ ಭಾತರ ನೆಲದ ಮೂಲ ಭಾಷೆ. ಸಂಸ್ಕೃತ ವಿಶ್ವದ ಬಹುತೇಕ ಭಾಷೆಗಳ ಜನನಿ. ಗಣಕ ಯಂತ್ರಕ್ಕೆ ಆಂಗ್ಲಭಾಷೆಗಿಂತಲೂ ಅತಿ ಹೆಚ್ಚಿನ ರೀತಿಯಲ್ಲಿ ಹೊಂದುವ ಮಹತ್ವ ಪಡೆದ ಭಾಷೆ.ಇದನ್ನು ಸಾಮಾನ್ಯ ಜನರಿಗೂ ಪರಿಚಯಿಸುವುದು ಇಂದು ಅನಿವಾರ್ಯ ಮತ್ತು ನಮ್ಮ ಕರ್ತವ್ಯ ವಾಗಿದೆ ಎಂದು ಡಾ. ಪ್ಯಾಟಿ ನುಡಿದರು.
ವಿದ್ಯಾಪೀಠದ ೧೫ ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ವಿವಿಧ ಮಳಿಗೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಗಮನ ಸೆಳೆಯಿತು.
ಬಹುಮಾನ: ಪ್ರದರ್ಶನವನ್ನು ನೋಡಿ ಐದು ಪದಾರ್ಥದ ಸಂಸ್ಕೃತದ ಹೆಸರನ್ನು ಹೇಳಿದ ಸಾರ್ವಜನಿಕರಿಗೆ ವಿಶೇಷ ಬಹುಮಾನವನ್ನು ಕೊಡಲಾಯಿತು. ಅನೇಕ ಜನರು ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಹೆಸರುಗಳನ್ನು ಕೇಳಿ, ಉಚ್ಚಾರಣೆ ಮಾಡಿ, ಅರ್ಥ ತಿಳಿದು ಸಂಭ್ರಮಿಸಿದರು.
ಧಾಮದಲ್ಲಿ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಮಕ್ಕಳು ಆಪಣ ಪ್ರದರ್ಶಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಡಾ. ಶ್ರೀ ನಿಧಿ ಪ್ಯಾಟಿ ನೇತೃತ್ವ ವಹಿಸಿದ್ದರು.
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…