ಮೈಸೂರು ನಗರ

ಸಂಸ್ಕೃತ ಅಖಂಡ ಭಾರತದ ಮೂಲ ಭಾಷೆ: ಡಾ. ಶ್ರೀನಿಧಿ ಪ್ಯಾಟಿ

ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ  ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ “ಸಂಸ್ಕೃತ ಆಪಣ ಪ್ರದರ್ಶಿನಿ” ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ  ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ ಎಂದರೆ ಸಂಸ್ಕೃತದಲ್ಲಿ ವ್ಯಾಪಾರ ಮಳಿಗೆ ಎಂದು ಅರ್ಥ. ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ದಿನನಿತ್ಯ ಬಳಸುವ ಹಣ್ಣು, ತರಕಾರಿ, ದಿನಸಿ ಪದಾರ್ಥಗಳ ಸಂಸ್ಕೃತ ಹೆಸರನ್ನು ಪರಿಚಯಿಸುವ ದೃಷ್ಟಿಯಿಂದ ವ್ಯಾಪಾರ ಮಳೆಗೆಯನ್ನು ನಿರ್ಮಿಸಿ ಅಲ್ಲಿ ಪ್ರತಿಯೊಂದು ಪದಾರ್ಥಗಳಿಗೆ ಸಂಸ್ಕೃತ ಹೆಸರನ್ನು ಫಲಕಗಳಲ್ಲಿ ಬರೆದು ಪ್ರದರ್ಶನ ಮಾಡಿ ಜನರಿಗೆ ಅರಿವು ಮೂಡಿಸಿರುವುದು ಮಾದರಿ ಕಾರ್ಯ ಎಂದರು.

ಸಂಸ್ಕೃತ ನಮ್ಮ ಅಖಂಡ ಭಾತರ ನೆಲದ ಮೂಲ ಭಾಷೆ. ಸಂಸ್ಕೃತ ವಿಶ್ವದ ಬಹುತೇಕ ಭಾಷೆಗಳ ಜನನಿ. ಗಣಕ ಯಂತ್ರಕ್ಕೆ ಆಂಗ್ಲಭಾಷೆಗಿಂತಲೂ ಅತಿ ಹೆಚ್ಚಿನ ರೀತಿಯಲ್ಲಿ ಹೊಂದುವ ಮಹತ್ವ ಪಡೆದ ಭಾಷೆ.ಇದನ್ನು ಸಾಮಾನ್ಯ ಜನರಿಗೂ ಪರಿಚಯಿಸುವುದು ಇಂದು ಅನಿವಾರ್ಯ ಮತ್ತು ನಮ್ಮ ಕರ್ತವ್ಯ ವಾಗಿದೆ ಎಂದು ಡಾ. ಪ್ಯಾಟಿ ನುಡಿದರು.

ವಿದ್ಯಾಪೀಠದ ೧೫ ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ವಿವಿಧ ಮಳಿಗೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಗಮನ ಸೆಳೆಯಿತು.

ಬಹುಮಾನ: ಪ್ರದರ್ಶನವನ್ನು ನೋಡಿ ಐದು ಪದಾರ್ಥದ ಸಂಸ್ಕೃತದ ಹೆಸರನ್ನು ಹೇಳಿದ ಸಾರ್ವಜನಿಕರಿಗೆ ವಿಶೇಷ ಬಹುಮಾನವನ್ನು ಕೊಡಲಾಯಿತು. ಅನೇಕ ಜನರು ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಹೆಸರುಗಳನ್ನು ಕೇಳಿ, ಉಚ್ಚಾರಣೆ ಮಾಡಿ, ಅರ್ಥ ತಿಳಿದು ಸಂಭ್ರಮಿಸಿದರು.

ಧಾಮದಲ್ಲಿ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಮಕ್ಕಳು ಆಪಣ ಪ್ರದರ್ಶಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಡಾ. ಶ್ರೀ ನಿಧಿ ಪ್ಯಾಟಿ ನೇತೃತ್ವ ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

9 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

9 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

10 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

10 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

10 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

10 hours ago