ಮೈಸೂರು ನಗರ

ಸಂಸ್ಕೃತ ಅಖಂಡ ಭಾರತದ ಮೂಲ ಭಾಷೆ: ಡಾ. ಶ್ರೀನಿಧಿ ಪ್ಯಾಟಿ

ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ  ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ “ಸಂಸ್ಕೃತ ಆಪಣ ಪ್ರದರ್ಶಿನಿ” ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ  ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ ಎಂದರೆ ಸಂಸ್ಕೃತದಲ್ಲಿ ವ್ಯಾಪಾರ ಮಳಿಗೆ ಎಂದು ಅರ್ಥ. ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ದಿನನಿತ್ಯ ಬಳಸುವ ಹಣ್ಣು, ತರಕಾರಿ, ದಿನಸಿ ಪದಾರ್ಥಗಳ ಸಂಸ್ಕೃತ ಹೆಸರನ್ನು ಪರಿಚಯಿಸುವ ದೃಷ್ಟಿಯಿಂದ ವ್ಯಾಪಾರ ಮಳೆಗೆಯನ್ನು ನಿರ್ಮಿಸಿ ಅಲ್ಲಿ ಪ್ರತಿಯೊಂದು ಪದಾರ್ಥಗಳಿಗೆ ಸಂಸ್ಕೃತ ಹೆಸರನ್ನು ಫಲಕಗಳಲ್ಲಿ ಬರೆದು ಪ್ರದರ್ಶನ ಮಾಡಿ ಜನರಿಗೆ ಅರಿವು ಮೂಡಿಸಿರುವುದು ಮಾದರಿ ಕಾರ್ಯ ಎಂದರು.

ಸಂಸ್ಕೃತ ನಮ್ಮ ಅಖಂಡ ಭಾತರ ನೆಲದ ಮೂಲ ಭಾಷೆ. ಸಂಸ್ಕೃತ ವಿಶ್ವದ ಬಹುತೇಕ ಭಾಷೆಗಳ ಜನನಿ. ಗಣಕ ಯಂತ್ರಕ್ಕೆ ಆಂಗ್ಲಭಾಷೆಗಿಂತಲೂ ಅತಿ ಹೆಚ್ಚಿನ ರೀತಿಯಲ್ಲಿ ಹೊಂದುವ ಮಹತ್ವ ಪಡೆದ ಭಾಷೆ.ಇದನ್ನು ಸಾಮಾನ್ಯ ಜನರಿಗೂ ಪರಿಚಯಿಸುವುದು ಇಂದು ಅನಿವಾರ್ಯ ಮತ್ತು ನಮ್ಮ ಕರ್ತವ್ಯ ವಾಗಿದೆ ಎಂದು ಡಾ. ಪ್ಯಾಟಿ ನುಡಿದರು.

ವಿದ್ಯಾಪೀಠದ ೧೫ ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ವಿವಿಧ ಮಳಿಗೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಗಮನ ಸೆಳೆಯಿತು.

ಬಹುಮಾನ: ಪ್ರದರ್ಶನವನ್ನು ನೋಡಿ ಐದು ಪದಾರ್ಥದ ಸಂಸ್ಕೃತದ ಹೆಸರನ್ನು ಹೇಳಿದ ಸಾರ್ವಜನಿಕರಿಗೆ ವಿಶೇಷ ಬಹುಮಾನವನ್ನು ಕೊಡಲಾಯಿತು. ಅನೇಕ ಜನರು ಉತ್ಸಾಹದಿಂದ ಭಾಗವಹಿಸಿ ಸಂಸ್ಕೃತದ ಹೆಸರುಗಳನ್ನು ಕೇಳಿ, ಉಚ್ಚಾರಣೆ ಮಾಡಿ, ಅರ್ಥ ತಿಳಿದು ಸಂಭ್ರಮಿಸಿದರು.

ಧಾಮದಲ್ಲಿ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಮಕ್ಕಳು ಆಪಣ ಪ್ರದರ್ಶಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಡಾ. ಶ್ರೀ ನಿಧಿ ಪ್ಯಾಟಿ ನೇತೃತ್ವ ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

11 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

11 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

11 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

11 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

11 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

12 hours ago