ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ಗೆ ಮಾಜಿ ಸಚಿವ ಸಾ.ರಾ.ಮಗೇಶ್ ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವ ಎಚ್ಡಿಕೆ ಅವರ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್ ಅಹಮ್ಮದ್ ಲಘುವಾಗಿ ಮಾತನಾಡಿದ್ದರು.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು, ದರಿದ್ರ ನಾರಾಯಣ ಹರಿ ಅಂತ 2006ರಲ್ಲಿ ಚಂದ ಎತ್ತಿ ಮಾಜಿ ಪ್ರಧಾನಿ ದೇವೇಗೌಡ ಅವರು, ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದರು. ಲಘುವಾಗಿ ಮಾತನಾಡುವುದು ಸರಿಯಲ್ಲ. ಇದೆಲ್ಲವನ್ನು ನೋಡಿದರೆ ಜನರಿಗೆ ರಾಜಕಾರಣದ ಬಗ್ಗೆ ಕೆಟ್ಟ ಮನೋಭಾವನೆ ಬೆಳೆಯುತ್ತದೆ ಎಂದು ಜಮೀರ್ ಅಹಮ್ಮದ್ಗೆ ತಿರುಗೇಟು ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ನೀವು ನಡೆದು ಬಂದ ಹಾದಿ ಬಗ್ಗೆ ಒಮ್ಮೆ ಕೂತು ಯೋಚನೆ ಮಾಡಿ. ಆಗ ಯಾರ ಬಗ್ಗೆಯೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಅಧಿಕಾರಕ್ಕಾಗಿ ಆತ್ಮಸಾಕ್ಷಿ ವಿರುದ್ಧ ನಡೆದುಕೊಳ್ಳಬೇಡಿ. ತಪ್ಪು ಮಾಡಿದವರನ್ನು ಮುಲಾಜಿಲ್ಲದೇ ಕಂಬಿ ಹಿಂದೆ ಹಾಕಿ ಎಂದು ಒತ್ತಾಯಿಸಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…