ಮೈಸೂರು ನಗರ

ಸತೀಶ್‌ ಜಾರಕಿಹೊಳಿ ಮುಂದಿನ ಸಿಎಂ ಆಗಬೇಕು : ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು : 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು. ಅಹಿಂದವನ್ನು ಮುನ್ನೆಡೆಸುವ ಶಕ್ತಿ ಹೊಂದಿರುವ ಕಾರಣ ಸಿದ್ದರಾಮಯ್ಯ ಅವರ ನಂತರದ ಉತ್ತರಾಧಿಕಾರಿ ಎನ್ನುವ ಮಾತನ್ನಾಡಲಾಗುತ್ತಿದೆ ಎಂದು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರೂ ಆದ ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

ಜಿಪಂ ಸಭಾಂಗಣದಲ್ಲಿ ಕ್ಷೇತ್ರದ ಅರಣ್ಯ ಸಮಸ್ಯೆಗಳ ಕುರಿತು ಕರೆದಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಐದು ವರ್ಷಗಳ ಕಾಲ ಮುಂದುವರಿಸಬೇಕು ಹಾಗೂ ಬೇಡ ಎಂಬ ವಿಚಾರವಾಗಿ ರಾಜ್ಯದಾದ್ಯಂತ ಚರ್ಚೆ ಜೋರಾಗಿರುವ ನಡುವೆ ಅನಿಲ್ ಚಿಕ್ಕಮಾದು,ನಾಯಕ ಸಮುದಾಯದ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದರು.

ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷಗಳನ್ನು ಪೂರೈಸಿದರೆ ಸಂತಸವಾಗಲಿದೆ. ಆದರೆ ಈ ನಿರ್ಧಾರವಾಗಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿದೆ ಎಂದರು.

೨೦೨೮ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬುದ್ಧ,ಬಸವ ಹಾಗೂ ಅಂಬೇಡ್ಕರ್ ಅನುಯಾಯಿಯಾಗಿರುವ ಸತೀಶ್ ಜಾರಕಿಹೊಳಿಗೆ ಸಿಎಂ ಸ್ಥಾನ ಸಿಗಬೇಕು ಎಂದು ಹೇಳಿದರು.

ಇದನ್ನೂ ಓದಿ:-ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ : ಸ್ಪೀಕರ್‌ ಯು.ಟಿ.ಖಾದರ್‌

ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಬೇಡಿಕೆ ಇದೆ ಎಂಬ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಜನಾಂಗದಲ್ಲಿ ೫ನೇ ಸ್ಥಾನದಲ್ಲಿರುವ ನಾಯಕ ಸಮುದಾಯಕ್ಕೆ ಅಂದಿನಿಂದ ಇಂದಿನವರೆಗೂ ಸಿಎಂ ಸ್ಥಾನ ಸಿಕ್ಕಿಲ್ಲ, ಹಾಗಾಗಿ ನಾಯಕ ಸಮುದಾಯದ ಪ್ರಬಲ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಸಿಗಬೇಕಿದೆ. ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಾಡು ಪ್ರಾಣಿ ಓಡಿಸಲು ಹೊಸ ಪ್ಲಾನ್:
ಆನೆ,ಹುಲಿ,ಚಿರತೆ ಇತರೆ ಕಾಡು ಪ್ರಾಣಿಗಳ ಕಾಡಂಚಿನ ಗ್ರಾಮ ಹಾಗೂ ಇತರೆ ಪ್ರದೇಶಗಳಿಗೆ ಬಂದರೆ, ಕಣ್ಣಿಗೆ ಲೈಟ್ ಬಿಟ್ಟು ಓಡಿಸುವ ಯೋಜನೆ ಚಿಂತನೆ ನಡೆಸಲಾಗಿದೆ.ಹುಲಿ,ಚಿರತೆ,ಕಾಡಾನೆ, ಸೆರೆಗೆ ಕಾರ್ಯಪಡೆಯೊಂದಿಗೆ ಉನ್ನತ ಅಧಿಕಾರಿಗಳನ್ನು ನೇಮಿಸುವ ಚಿಂತನೆ ಕೂಡ ನಡೆಯುತ್ತಿದೆ. ಕಾಡು ಪ್ರಾಣಿಗಳು ಗ್ರಾಮ ಹಾಗೂ ಜಮೀನಿಗೆ ಬಂದಾಗ, ಸಾರುವ ಪದ್ಧತಿ ಹಿಂದೆ ಇತ್ತು, ಅದನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago