ಮೈಸೂರು ನಗರ

ಮೈಸೂರು| ಮಾರುಕಟ್ಟೆಗೆ ಲಗ್ಗೆ ಇಟ್ಟ ಕಪ್ಪು ಸುಂದರಿ

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.

ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. ಆದರೆ ಈ ಮಾವಿನ ಜಾಗವನ್ನು ಸ್ವಲ್ಪ ಸ್ವಲ್ಪವಾಗಿ ನೇರಳೆ ಹಣ್ಣು ಅಕ್ರಮಿಸುತ್ತಿದ್ದು, ಎತ್ತ ಕಡೆ ನೋಡಿದರು ಈಗ ನೇರಳೆ ಹಣ್ಣೆ ಕಾಣಿಸುತ್ತಿದೆ.

ರಸ್ತೆ ಬದಿಗಳಲ್ಲಿ ತಳ್ಳುವ ಗಾಡಿಗಳಲ್ಲಿ ನೇರಳೆ ಹಣ್ಣನ್ನು ಮಾರಾಟ ಮಾಡಲಾಗುತ್ತಿದೆ. ಈ ಬಾರಿ ನೇರಳೆ ಹಣ್ಣಿನ ಇಳುವರಿ ಕಡಿಮೆಯಾಗಿರುವ ಪರಿಣಾಮ ಹಣ್ಣಿನ ಬೆಲೆ ದುಪ್ಪಟ್ಟು ಏರಿಕೆಯಾಗಿದೆ. ಆದರೆ ಹಲವು ಔಷಧೀಯ ಗುಣ ಹೊಂದಿರುವುದರಿಂದ ಬೆಲೆ ಏರಿಕೆಯ ನಡುವೆಯೂ ನೇರಳೆ ಹಣ್ಣಿನ ಖರೀದಿಗೆ ಗ್ರಾಹಕರು ಮುಂದಾಗಿದ್ದು, ನೇರಳೆ ಹಣ್ಣಿನ ಮಾರಾಟ ಮೊದಲ ವಾರದಲ್ಲಿಯೇ ತುಸು ಹೆಚ್ಚಾಗಿದೆ.

ಸಾಮಾನ್ಯವಾಗಿ ನೇರಳೆ ಹಣ್ಣು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಹೂ ಬಿಡುವುದಕ್ಕೆ ಶುರುಮಾಡಿ, ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಕಾಯಿ ಕಟ್ಟಿ ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಹಣ್ಣಾಗಿ ಹೇರಳವಾಗಿ ಹಣ್ಣು ಬಿಡುವುದಕ್ಕೆ ಶುರು ಮಾಡುತ್ತದೆ.

ಈ ಬಾರಿ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ನೇರಳೆಗೆ 300 ರೂಗಳಿಂದ 350 ರೂ ಮಾರಾಟ ಮಾಡಲಾಗುತ್ತಿದೆ. ಕಳೆದ ಬಾರಿ ನೇರಳೆ ಹಣ್ಣನ್ನು ಕೆ.ಜಿಗೆ 250 ರಿಂದ 300 ರೂವರೆಗೆ ಮಾರಾಟ ಮಾಡಲಾಗುತ್ತಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ಬೆಲೆ ಸ್ವಲ್ಪ ಜಾಸ್ತಿಯಾಗಿದೆ.

ನೇರಳೆ ಅನೇಕ ರೋಗಕ್ಕೆ ಮದ್ದು:
ನೇರಳೆ ಕೇವಲ ಒಂದು ಹಣ್ಣು ಮಾತ್ರವಲ್ಲ. ಈ ಹಣ್ಣು ಅನೇಕ ಔಷಧಿಯ ಗುಣಗಳನ್ನು ಹೊಂದಿದೆ. ಈ ನೇರಳೆ ಹಣ್ಣನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಣ, ತೊದಲುವಿಕೆ ನಿವಾರಣೆ, ಜೀರ್ಣಕ್ರಿಯೆ, ಗಂಟಲು ನೋವು, ಬಾಯಿ ದುರ್ಗಂಧ, ಗೂರಲು, ಉಬ್ಬಸ ತಡೆಗೆ ರಾಮಬಾಣದಂತೆ ಉಪಯುಕ್ತವಾಗಿದೆ ಎನ್ನುತ್ತಾರೆ ವೈದ್ಯರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

1 hour ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

3 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

3 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

3 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

4 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

9 hours ago