ಮೈಸೂರು ನಗರ

ಮೈಸೂರು| ಮಾರುಕಟ್ಟೆಗೆ ಲಗ್ಗೆ ಇಟ್ಟ ಕಪ್ಪು ಸುಂದರಿ

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.

ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. ಆದರೆ ಈ ಮಾವಿನ ಜಾಗವನ್ನು ಸ್ವಲ್ಪ ಸ್ವಲ್ಪವಾಗಿ ನೇರಳೆ ಹಣ್ಣು ಅಕ್ರಮಿಸುತ್ತಿದ್ದು, ಎತ್ತ ಕಡೆ ನೋಡಿದರು ಈಗ ನೇರಳೆ ಹಣ್ಣೆ ಕಾಣಿಸುತ್ತಿದೆ.

ರಸ್ತೆ ಬದಿಗಳಲ್ಲಿ ತಳ್ಳುವ ಗಾಡಿಗಳಲ್ಲಿ ನೇರಳೆ ಹಣ್ಣನ್ನು ಮಾರಾಟ ಮಾಡಲಾಗುತ್ತಿದೆ. ಈ ಬಾರಿ ನೇರಳೆ ಹಣ್ಣಿನ ಇಳುವರಿ ಕಡಿಮೆಯಾಗಿರುವ ಪರಿಣಾಮ ಹಣ್ಣಿನ ಬೆಲೆ ದುಪ್ಪಟ್ಟು ಏರಿಕೆಯಾಗಿದೆ. ಆದರೆ ಹಲವು ಔಷಧೀಯ ಗುಣ ಹೊಂದಿರುವುದರಿಂದ ಬೆಲೆ ಏರಿಕೆಯ ನಡುವೆಯೂ ನೇರಳೆ ಹಣ್ಣಿನ ಖರೀದಿಗೆ ಗ್ರಾಹಕರು ಮುಂದಾಗಿದ್ದು, ನೇರಳೆ ಹಣ್ಣಿನ ಮಾರಾಟ ಮೊದಲ ವಾರದಲ್ಲಿಯೇ ತುಸು ಹೆಚ್ಚಾಗಿದೆ.

ಸಾಮಾನ್ಯವಾಗಿ ನೇರಳೆ ಹಣ್ಣು ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಹೂ ಬಿಡುವುದಕ್ಕೆ ಶುರುಮಾಡಿ, ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಕಾಯಿ ಕಟ್ಟಿ ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಹಣ್ಣಾಗಿ ಹೇರಳವಾಗಿ ಹಣ್ಣು ಬಿಡುವುದಕ್ಕೆ ಶುರು ಮಾಡುತ್ತದೆ.

ಈ ಬಾರಿ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ನೇರಳೆಗೆ 300 ರೂಗಳಿಂದ 350 ರೂ ಮಾರಾಟ ಮಾಡಲಾಗುತ್ತಿದೆ. ಕಳೆದ ಬಾರಿ ನೇರಳೆ ಹಣ್ಣನ್ನು ಕೆ.ಜಿಗೆ 250 ರಿಂದ 300 ರೂವರೆಗೆ ಮಾರಾಟ ಮಾಡಲಾಗುತ್ತಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ಬೆಲೆ ಸ್ವಲ್ಪ ಜಾಸ್ತಿಯಾಗಿದೆ.

ನೇರಳೆ ಅನೇಕ ರೋಗಕ್ಕೆ ಮದ್ದು:
ನೇರಳೆ ಕೇವಲ ಒಂದು ಹಣ್ಣು ಮಾತ್ರವಲ್ಲ. ಈ ಹಣ್ಣು ಅನೇಕ ಔಷಧಿಯ ಗುಣಗಳನ್ನು ಹೊಂದಿದೆ. ಈ ನೇರಳೆ ಹಣ್ಣನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಣ, ತೊದಲುವಿಕೆ ನಿವಾರಣೆ, ಜೀರ್ಣಕ್ರಿಯೆ, ಗಂಟಲು ನೋವು, ಬಾಯಿ ದುರ್ಗಂಧ, ಗೂರಲು, ಉಬ್ಬಸ ತಡೆಗೆ ರಾಮಬಾಣದಂತೆ ಉಪಯುಕ್ತವಾಗಿದೆ ಎನ್ನುತ್ತಾರೆ ವೈದ್ಯರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

57 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago