ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಅಹಿತಕರ ಘಟನೆ ನಡೆಯದಂತೆ ಹೈ ಅಲರ್ಟ್: ಸೀಮಾ ಲಾಟ್ಕರ್

ಮೈಸೂರು: 2025ರ ಹೊಸ ವರ್ಷಾಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸ್‌ ಇಲಾಖೆ ಹೈ ಆಲರ್ಟ್‌ ಆಗಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಅವರು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಲಾಗಿದೆ. ಅಲ್ಲದೇ ಇಂದು(ಡಿಸೆಂಬರ್‌.31) ರಾತ್ರಿ 8 ಗಂಟೆಯಿಂದ 2025ರ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೂ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ಚಾಮುಂಡಿ ಬೆಟ್ಟದಲ್ಲಿರುವವರೆಲ್ಲರೂ ರಾತ್ರಿ 9 ಗಂಟೆಯ ನಂತರ ಖಾಲಿ ಮಾಡಿಕೊಂಡು ಕೆಳಕ್ಕೆ ಬರಬೇಕು. ಆದರೆ ಬೆಟ್ಟಕ್ಕೆ ಊಟ ಮತ್ತು ಮದ್ಯವನ್ನು ತೆಗೆದುಕೊಂಡು ಹೋಗುತ್ತಿಲ್ಲ. ತಾವರೆಕಟ್ಟೆ ಮಾರ್ಗದ ಮೂಲಕ ಬೆಟ್ಟದಿಂದ ನಿರ್ಗಮಿಸಬೇಕು. ಬೆಟ್ಟದ ನಿವಾಸಿಗಳನ್ನು ಹೊರತು ಪಡಿಸಿ ಯಾರೇ ಹೋದರೂ ಅಂತಹವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೆ ಹೊಸ ವರ್ಷದ ದಿನದಂದು ಚಾಮುಂಡಿ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆ ಖಾಕಿ ಕಣ್ಗಾವಲು

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್‌ ಆಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಲು ಸಂಭವಿಸಿದಂತೆ ಖಾಕಿ ಕಣ್ಗಾವಲು ವಹಿಸಿದೆ. ಹೀಗಾಗಿ ಪೊಲೀಸ್‌ ಇಲಾಖೆಯೂ ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ, ರೈಲ್ವೆ ನಿಲ್ದಾಣ ಹಾಗೂ ಬಸ್‌ ನಿಲ್ದಾಣ ಸೇರಿದಂತೆ ಬಾಂಬ್‌ ಪತ್ತೆದಳ ಹಾಗೂ ಶ್ವಾನದಳ ದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಅಲ್ಲದೇ ನಗರದ ಅನೇಕ ಸ್ಥಳಗಳಲ್ಲಿಯೂ ಸಹ ಶೋಧ ನಡೆಸಿದ್ದು, ಅನುಮಾನಸ್ಪದ ವಸ್ತು ಹಾಗೂ ವ್ಯಕ್ತಿಗಳನ್ನು ತಪಾಸಣಾ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

31 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago