ಮೈಸೂರು ನಗರ

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮೂಲಕ ಕಣ್ಗಾವಲು ವಹಿಸಲಿದ್ದಾರೆ ಎಂದು ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.30) ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಪ್ರಯುಕ್ತ 2025ರ ಜನವರಿ 1 ರಂದು ಮಧ್ಯರಾತ್ರಿ ಒಂದು ಗಂಟೆಯವರೆಗೂ ಅವಕಾಶ ನೀಡಲಾಗಿದೆ. ಆದರೆ ಈ ನಿಯಮವನ್ನು ಮೀರಿದರೆ ದಂಡ ಬಿಳೋದು ಖಂಡಿತ. ಇನ್ನೂ ಶುಭ ಕೋರುವ ನೆಪದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಮಹಿಳೆಯರ ರಕ್ಷಣೆಗಾಗಿ ಪಿಂಕ್‌ ಗರುಡ ಪೊಲೀಸ್‌ ಪಡೆ ಗಸ್ತು ತಿರುಗಲಿದೆ. ಜೊತೆಗೆ ಹೊಸ ವರ್ಷ ಸಂಭ್ರಮದ ನೆಪದಲ್ಲಿ ವೀಲ್ಹಿಂಗ್‌ ಹಾಗೂ ಡ್ರಾಗ್‌ ರೇಸ್‌, ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಕ್ಷಿಪ್ರ ಪಡೆ ಕಾರ್ಯ ನಿರ್ವಹಿಸಲಿದೆ ಹಾಗೂ ಅದರೊಂದಿಗೆ ವಿದ್ವಂಸಕ ಕೃತ್ಯ ತಡೆಗೆ ಶ್ವಾನ ದಳವೂ ಕೂಡ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ನಗರದಾದ್ಯಂತ ಭದ್ರತೆಗಾಗಿ ಪೊಲೀಸ್‌ ಇಲಾಖೆಯ ವತಿಯಿಂದ 4 ಡಿಸಿಪಿ, 12 ಎಸಿಪಿ, 32 ಪಿಐ, 53 ಪಿಎಸ್‌ಐ, 112 ಎಎಸ್‌ಐ, 895 ಎಚ್‌ಸಿ ಹಾಗೂ ಪೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ 8 ಸಿಎಆರ್‌ ತುಕಡಿ, 4 ಕೆಎಸ್‌ಆರ್‌ಪಿ, 2 ಕಮಾಂಡೋ ಪಡೆ, 1 ಶ್ವಾನ ದಳ ಹಾಗೂ 2 ಎಎಸ್‌ಪಿಯಿಂದ ಬಿಗಿ ಬಂದೋ ಬಸ್ತ್‌ ಮಾಡುವ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರು ಒಂದು ವೇಳೆ ನಿಯಮ ಮೀರಿದರೆ ದಂಡ ವಿಧಿಸಲಾಗುವುದು. ಹೊಸ ವರ್ಷಾಚರಣೆಯನ್ನು ಮುಕ್ತಾಯಗೊಳಿಸಲು ಜನವರಿ 2ರ ಮಧ್ಯರಾತ್ರಿ 1 ಗಂಟೆಯವರೆಗೂ ಪೊಲೀಸ್‌ ಇಲಾಖೆ ಗಡುವು ನೀಡಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

42 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

47 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago