ಮೈಸೂರು ನಗರ

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮೂಲಕ ಕಣ್ಗಾವಲು ವಹಿಸಲಿದ್ದಾರೆ ಎಂದು ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.30) ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಪ್ರಯುಕ್ತ 2025ರ ಜನವರಿ 1 ರಂದು ಮಧ್ಯರಾತ್ರಿ ಒಂದು ಗಂಟೆಯವರೆಗೂ ಅವಕಾಶ ನೀಡಲಾಗಿದೆ. ಆದರೆ ಈ ನಿಯಮವನ್ನು ಮೀರಿದರೆ ದಂಡ ಬಿಳೋದು ಖಂಡಿತ. ಇನ್ನೂ ಶುಭ ಕೋರುವ ನೆಪದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಮಹಿಳೆಯರ ರಕ್ಷಣೆಗಾಗಿ ಪಿಂಕ್‌ ಗರುಡ ಪೊಲೀಸ್‌ ಪಡೆ ಗಸ್ತು ತಿರುಗಲಿದೆ. ಜೊತೆಗೆ ಹೊಸ ವರ್ಷ ಸಂಭ್ರಮದ ನೆಪದಲ್ಲಿ ವೀಲ್ಹಿಂಗ್‌ ಹಾಗೂ ಡ್ರಾಗ್‌ ರೇಸ್‌, ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಕ್ಷಿಪ್ರ ಪಡೆ ಕಾರ್ಯ ನಿರ್ವಹಿಸಲಿದೆ ಹಾಗೂ ಅದರೊಂದಿಗೆ ವಿದ್ವಂಸಕ ಕೃತ್ಯ ತಡೆಗೆ ಶ್ವಾನ ದಳವೂ ಕೂಡ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ನಗರದಾದ್ಯಂತ ಭದ್ರತೆಗಾಗಿ ಪೊಲೀಸ್‌ ಇಲಾಖೆಯ ವತಿಯಿಂದ 4 ಡಿಸಿಪಿ, 12 ಎಸಿಪಿ, 32 ಪಿಐ, 53 ಪಿಎಸ್‌ಐ, 112 ಎಎಸ್‌ಐ, 895 ಎಚ್‌ಸಿ ಹಾಗೂ ಪೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ 8 ಸಿಎಆರ್‌ ತುಕಡಿ, 4 ಕೆಎಸ್‌ಆರ್‌ಪಿ, 2 ಕಮಾಂಡೋ ಪಡೆ, 1 ಶ್ವಾನ ದಳ ಹಾಗೂ 2 ಎಎಸ್‌ಪಿಯಿಂದ ಬಿಗಿ ಬಂದೋ ಬಸ್ತ್‌ ಮಾಡುವ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರು ಒಂದು ವೇಳೆ ನಿಯಮ ಮೀರಿದರೆ ದಂಡ ವಿಧಿಸಲಾಗುವುದು. ಹೊಸ ವರ್ಷಾಚರಣೆಯನ್ನು ಮುಕ್ತಾಯಗೊಳಿಸಲು ಜನವರಿ 2ರ ಮಧ್ಯರಾತ್ರಿ 1 ಗಂಟೆಯವರೆಗೂ ಪೊಲೀಸ್‌ ಇಲಾಖೆ ಗಡುವು ನೀಡಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago