ಮೈಸೂರು ನಗರ

ಸೀನಿಯರ್‌ ಡಾಕ್ಟರ್‌ ಇತಿಹಾಸವನ್ನೇ ತಿರುಚಲು ಯತ್ನಿಸಿದ್ದಾರೆ: ಸಚಿವ ಎಚ್‌ಸಿಎಂ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಶುರು ಮಾಡಿದ್ದು ಟಿಪ್ಪು ಸುಲ್ತಾನ್‌ ಎಂದೇ ಹೇಳಿಬಿಡಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಕೆಆರ್‌ಎಸ್‌ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜ್ಯೂನಿಯರ್‌ ಡಾಕ್ಟರ್‌ ಹೊಸ ಇತಿಹಾಸ ಬರೆಯಲು ಹೊರಟರೆ, ಸೀನಿಯರ್‌ ಡಾಕ್ಟರ್‌ ಇತಿಹಾಸವನ್ನೇ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಜ್ಯೂನಿಯರ್‌ ಡಾಕ್ಟರ್‌ ಯತೀಂದ್ರ ನಾಲ್ವಡಿಗಿಂತ ನಮ್ಮಪ್ಪನೇ ದೊಡ್ಡ ವ್ಯಕ್ತಿ ಎಂದಿದ್ದರು. ಈಗ ಸೀನಿಯರ್‌ ಡಾಕ್ಟರ್‌ ಮಹದೇವಪ್ಪ ಅವರ ಸರದಿ ಎಂದು ವ್ಯಂಗ್ಯವಾಡಿದರು.

ಟಿಪ್ಪು ಸುಲ್ತಾನ್‌ ಕೆಆರ್‌ಎಸ್‌ಗೆ ಅಡಿಗಲ್ಲು ಇಟ್ಟಿದ್ದರೆ ಯಾರೋ ಮುಲ್ಲಾನ ಮೌಲ್ವಿನೋ ಡಿಪಿಆರ್‌ ಮಾಡಿರಬೇಕು ತಾನೇ? ಅವರು ಯಾರು ಎಂದು ಹೇಳಲಿ. ಟಿಪ್ಪು ಆಳ್ವಿಕೆ ಇದ್ದ ವೇಳೆ ವಿಶ್ವೇಶ್ವರಯ್ಯ ಅವರೇ ಹುಟ್ಟಿರಲಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಇರದಿದ್ದರೆ ಕೆಆರ್‌ಎಸ್‌ ಜಲಾಶಯವೇ ನಿರ್ಮಾಣ ಆಗುತ್ತಿರಲಿಲ್ಲ. 1799ರಲ್ಲಿ ಟಿಪ್ಪು ಸುಲ್ತಾನ ಸತ್ತೋದ. 1911ರಲ್ಲಿ ಕೆಆರ್‌ಎಸ್‌ ಕಟ್ಟಲು ಶುರು ಮಾಡಿದರು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಫೇಕ್‌ ನ್ಯೂಸ್‌ ಹರಡಿದವರ ಮೇಲೆ ಕೇಸ್‌ ಹಾಕೋಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲು ಈ ಕಾಯ್ದೆ ತರಲಿ. ಮೊದಲ ಕೇಸ್‌ ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಯತೀಂದ್ರ ಮೇಲೆಯೇ ಹಾಕಿಸಿ. ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

5 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

6 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

6 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

7 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

7 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

8 hours ago