prathap simha
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಶುರು ಮಾಡಿದ್ದು ಟಿಪ್ಪು ಸುಲ್ತಾನ್ ಎಂದೇ ಹೇಳಿಬಿಡಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಕೆಆರ್ಎಸ್ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜ್ಯೂನಿಯರ್ ಡಾಕ್ಟರ್ ಹೊಸ ಇತಿಹಾಸ ಬರೆಯಲು ಹೊರಟರೆ, ಸೀನಿಯರ್ ಡಾಕ್ಟರ್ ಇತಿಹಾಸವನ್ನೇ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜ್ಯೂನಿಯರ್ ಡಾಕ್ಟರ್ ಯತೀಂದ್ರ ನಾಲ್ವಡಿಗಿಂತ ನಮ್ಮಪ್ಪನೇ ದೊಡ್ಡ ವ್ಯಕ್ತಿ ಎಂದಿದ್ದರು. ಈಗ ಸೀನಿಯರ್ ಡಾಕ್ಟರ್ ಮಹದೇವಪ್ಪ ಅವರ ಸರದಿ ಎಂದು ವ್ಯಂಗ್ಯವಾಡಿದರು.
ಟಿಪ್ಪು ಸುಲ್ತಾನ್ ಕೆಆರ್ಎಸ್ಗೆ ಅಡಿಗಲ್ಲು ಇಟ್ಟಿದ್ದರೆ ಯಾರೋ ಮುಲ್ಲಾನ ಮೌಲ್ವಿನೋ ಡಿಪಿಆರ್ ಮಾಡಿರಬೇಕು ತಾನೇ? ಅವರು ಯಾರು ಎಂದು ಹೇಳಲಿ. ಟಿಪ್ಪು ಆಳ್ವಿಕೆ ಇದ್ದ ವೇಳೆ ವಿಶ್ವೇಶ್ವರಯ್ಯ ಅವರೇ ಹುಟ್ಟಿರಲಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಇರದಿದ್ದರೆ ಕೆಆರ್ಎಸ್ ಜಲಾಶಯವೇ ನಿರ್ಮಾಣ ಆಗುತ್ತಿರಲಿಲ್ಲ. 1799ರಲ್ಲಿ ಟಿಪ್ಪು ಸುಲ್ತಾನ ಸತ್ತೋದ. 1911ರಲ್ಲಿ ಕೆಆರ್ಎಸ್ ಕಟ್ಟಲು ಶುರು ಮಾಡಿದರು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಫೇಕ್ ನ್ಯೂಸ್ ಹರಡಿದವರ ಮೇಲೆ ಕೇಸ್ ಹಾಕೋಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲು ಈ ಕಾಯ್ದೆ ತರಲಿ. ಮೊದಲ ಕೇಸ್ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಯತೀಂದ್ರ ಮೇಲೆಯೇ ಹಾಕಿಸಿ. ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಕಿಡಿಕಾರಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…