ಮೈಸೂರು ನಗರ

ಸೀನಿಯರ್‌ ಡಾಕ್ಟರ್‌ ಇತಿಹಾಸವನ್ನೇ ತಿರುಚಲು ಯತ್ನಿಸಿದ್ದಾರೆ: ಸಚಿವ ಎಚ್‌ಸಿಎಂ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಶುರು ಮಾಡಿದ್ದು ಟಿಪ್ಪು ಸುಲ್ತಾನ್‌ ಎಂದೇ ಹೇಳಿಬಿಡಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಕೆಆರ್‌ಎಸ್‌ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜ್ಯೂನಿಯರ್‌ ಡಾಕ್ಟರ್‌ ಹೊಸ ಇತಿಹಾಸ ಬರೆಯಲು ಹೊರಟರೆ, ಸೀನಿಯರ್‌ ಡಾಕ್ಟರ್‌ ಇತಿಹಾಸವನ್ನೇ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಜ್ಯೂನಿಯರ್‌ ಡಾಕ್ಟರ್‌ ಯತೀಂದ್ರ ನಾಲ್ವಡಿಗಿಂತ ನಮ್ಮಪ್ಪನೇ ದೊಡ್ಡ ವ್ಯಕ್ತಿ ಎಂದಿದ್ದರು. ಈಗ ಸೀನಿಯರ್‌ ಡಾಕ್ಟರ್‌ ಮಹದೇವಪ್ಪ ಅವರ ಸರದಿ ಎಂದು ವ್ಯಂಗ್ಯವಾಡಿದರು.

ಟಿಪ್ಪು ಸುಲ್ತಾನ್‌ ಕೆಆರ್‌ಎಸ್‌ಗೆ ಅಡಿಗಲ್ಲು ಇಟ್ಟಿದ್ದರೆ ಯಾರೋ ಮುಲ್ಲಾನ ಮೌಲ್ವಿನೋ ಡಿಪಿಆರ್‌ ಮಾಡಿರಬೇಕು ತಾನೇ? ಅವರು ಯಾರು ಎಂದು ಹೇಳಲಿ. ಟಿಪ್ಪು ಆಳ್ವಿಕೆ ಇದ್ದ ವೇಳೆ ವಿಶ್ವೇಶ್ವರಯ್ಯ ಅವರೇ ಹುಟ್ಟಿರಲಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಇರದಿದ್ದರೆ ಕೆಆರ್‌ಎಸ್‌ ಜಲಾಶಯವೇ ನಿರ್ಮಾಣ ಆಗುತ್ತಿರಲಿಲ್ಲ. 1799ರಲ್ಲಿ ಟಿಪ್ಪು ಸುಲ್ತಾನ ಸತ್ತೋದ. 1911ರಲ್ಲಿ ಕೆಆರ್‌ಎಸ್‌ ಕಟ್ಟಲು ಶುರು ಮಾಡಿದರು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಫೇಕ್‌ ನ್ಯೂಸ್‌ ಹರಡಿದವರ ಮೇಲೆ ಕೇಸ್‌ ಹಾಕೋಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲು ಈ ಕಾಯ್ದೆ ತರಲಿ. ಮೊದಲ ಕೇಸ್‌ ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಯತೀಂದ್ರ ಮೇಲೆಯೇ ಹಾಕಿಸಿ. ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago