ಮೈಸೂರು ನಗರ

ಹಿರಿಯ ಪತ್ರಕರ್ತ ಎಸ್.ಪ್ರಕಾಶ್ ಬಾಬು ಅವರ ಎರಡೂ ಕೃತಿಗಳ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಮತ್ತು ಲೇಖಕ ಎಸ್.ಪ್ರಕಾಶ್ ಬಾಬು ಅವರು ಬರೆದಿರುವ ʼʼಅವರು ಹೋದಮೇಲೆʼʼ ಮತ್ತು ʼʼಸಿನಿ ಸಾಧಕರ ಟರ್ನಿಂಗ್ ಪಾಯಿಂಟ್ʼʼ ಎಂಬ ಎರಡು ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.

ಇಂದು ಬೆಳಿಗ್ಗೆ ಮೈಸೂರು ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಎರಡು ಕೃತಿಗಳನ್ನು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಬಿಡುಗಡೆ ಮಾಡಿದರು.

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಿಮಾಲಯ ಫೌಂಡೇಶನ್ ಮತ್ತು ಬೆಂಗಳೂರಿನ ಸಿವಿಜಿ ಪಬ್ಲಿಕೇಷನ್ಸ್ ಜಂಟಿಯಾಗಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಮೈಸೂರು ನಗರಾಭಿವೃದ್ಧಿ ಸಂಸ್ಥೆ ಮಾಜಿ ಅಧ್ಯಕ್ಷ ಡಿ.ಮಾದೇಗೌಡ ಅವರು, ಪತ್ರಕರ್ತರಾಗಿ ಸಾಹಿತ್ಯ ರೂಢಿಸಿಕೊಂಡಿರುವ ಎಸ್.ಪ್ರಕಾಶ್ ಬಾಬು ಅವರ “ಅವರು ಹೋದಮೇಲೆ” ಮತ್ತು “ಸಿನಿ ಸಾಧಕರ ಟರ್ನಿಂಗ್ ಪಾಯಿಂಟ್” ಎಂಬ ಎರಡು ಕೃತಿಗಳು ಸಾಧನೆ ಮಾಡಿ ಗತಿಸಿದ ಮತ್ತು ಸಾಧನೆ ಮಾಡುತ್ತಿರುವ ಸಾಧಕರ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ತಿಳಿಸುತ್ತದೆ.

ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಯುವಕರಿಗೆ ಇವೆರಡೂ ಕೃತಿಗಳು ಸ್ಪೂರ್ತಿದಾಯಕವಾಗಿವೆ. ಇದೊಂದು ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಟ ಪ್ರಾಕಾರವಾಗಿಯೂ ಈ ಕೃತಿಗಳು ಗುರುತಿಸಿಕೊಳ್ಳುತ್ತವೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಹಾಗೂ ಶ್ರೀದತ್ತಪೀಠದ ಆಸ್ಥಾನ್ ವಿದ್ವಾನ್ ಪ್ರೊ.ಸಿಪಿಕೆ ಎಂದೇ ಖ್ಯಾತರಾದ ಡಾ.ಸಿ.ಪಿ.ಕೃಷ್ಣಕುಮಾರ್ ಅವರು ಮಾತನಾಡಿ, “ಅವರು ಹೋದಮೇಲೆ” ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ್ ಅರಸ್ ಮತ್ತು ಕನ್ನಡ ಚಿತ್ರರಂಗದ ಮೇರು ನಟರಾದ ಡಾ ರಾಜಕುಮಾರ್ ಸೇರಿದಂತೆ 35 ಗಮನಾರ್ಹ ವ್ಯಕ್ತಿಗಳು ಸಮಾಜದ ಮೇಲೆ ಶಾಶ್ವತವಾದ ಪ್ರಭಾವವನ್ನು ಹೇಗೆ ಬೀರಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಹಾಗೇ “ಸಿನಿ ಸಾಧಕರ ಟರ್ನಿಂಗ್ ಪಾಯಿಂಟ್” ಪುಸ್ತಕವು ಹಿರಿಯ ನಟಿಯರಾದ ಭಾರತಿ, ಜಯಂತಿ ಅವರನ್ನಲ್ಲದೆ, ಈಗಿನ ನಟರಾದ ನಟ ದರ್ಶನ್ ತೂಗುದೀಪ ಸೇರಿದಂತೆ ಹಲವಾರು ಸಿನಿ ಕಲಾವಿದರು ತಮ್ಮ ವೃತ್ತಿ ಬದುಕಿನ ಆರಂಭದಲ್ಲಿ ಸಾಧನೆಯ ಬೆನ್ನು ಹತ್ತಿ ಗೆದ್ದ ತಿರುವಿನ ಬಗ್ಗೆ ಆಸಕ್ತಿದಾಯಕ ಒಳನೋಟಗಳನ್ನು ಹಂಚಿಕೊಳ್ಳುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವಧೂತ ದತ್ತ ಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಪರಮ ಹಂಸ ಪರಿವ್ರಾಜಕ ಸ್ವಾಮೀಜಿ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಎಸ್.ಪ್ರಕಾಶ್ ಬಾಬು ಅವರು ಬರೆದ ಎರಡೂ ಕೃತಿಗಳಲ್ಲಿ ಸಿನಿಮಾ ಕ್ಷೇತ್ರದವರ ವಿಷಯಗಳೇ ಹೆಚ್ಚಿದ್ದರೂ, ಅದರಲ್ಲಿರುವ ಸಾಹಿತ್ಯ ಸರಸ್ವತಿ ಅಕ್ಕರೆಯಿಂದ ಸಾಧಕರನ್ನು ಕರೆದು ಪ್ರೋತ್ಸಾಹಿಸುವಂತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್, ಸಮಾಜಸೇವಕ ಡಾ.ಕೆ.ರಘುರಾಮ್ ವಾಜಪೇಯಿ, ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ಅಧ್ಯಕ್ಷ ಡಿ.ರವಿಕುಮಾರ್, ಲೇಖಕ ಎಸ್.ಪ್ರಕಾಶ್‌ಬಾಬು ಮತ್ತು ವ್ಯಂಗ್ಯಚಿತ್ರಕಾರ ಎಂ ವಿ ನಾಗೇಂದ್ರ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿಮಾಲಯ ಫೌಂಡೇಷನ್ ಅಧ್ಯಕ್ಷ ಎನ್.ಅನಂತ ಅವರು ಕಾರ್ಯಕ್ರಮದ ವಂದನಾರ್ಪಣೆ ಮಾಡಿದರು. ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ವಿ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

41 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago