ಮೈಸೂರು ನಗರ

ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಚಿತ್ರ ವೀಕ್ಷಿಸಿದ ಶಿವರಾಜ್‌ ಕುಮಾರ್‌

ಮೈಸೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು.

ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್‌ ಕುಮಾರ್‌ ಅವರು ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿದರು.

ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್‌ ಕುಮಾರ್‌ ಅವರು, ಶಕ್ತಿಧಾಮದ ಮಕ್ಕಳ ಜೊತೆ ಸಿನಿಮಾ ನೋಡಿ ಖುಷಿ ಆಗಿದೆ. ಸಿನಿಮಾ ತುಂಬಾ ಚೆನ್ನಾಗಿದೆ. ಗೀತಾ ಹೆಸರಲ್ಲಿ ಒಂದು ಶಕ್ತಿಯಿದೆ. ಈ ಹಿಂದೆ ಅನೇಕ ಸಿನಿಮಾಗಳು ಗೀತಾ ಹೆಸರಿನಲ್ಲಿ ಬಂದು ಹಿಟ್ ಆಗಿವೆ. ಈ ಸಿನಿಮಾವು ಹಿಟ್ ಆಗುತ್ತದೆ. ನಾಗಶೇಖರ್ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ನನಗೂ ಒಂದು ಸಿನಿಮಾ ಡೈರೆಕ್ಟ್ ಮಾಡ್ತೀನಿ ಎಂದು ಈ ಹಿಂದೆ ಹೇಳಿದ್ದರು. ಅದಕ್ಕಾಗಿ ನಾನು ಕೂಡ ಕಾಯ್ತಾ ಇದ್ದೀನಿ ಎಂದರು.

ಇನ್ನು ಮಲ್ಟಿಫ್ಲೆಕ್ಸ್‌ನಲ್ಲಿ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲದಕ್ಕೂ ನಮ್ಮನ್ನ ಕೇಳಿದ್ರೆ ಹೇಗೆ? ನೀವು ಕೂಡ ನಮ್ಮ ಜೊತೆ ಕೈಜೋಡಿಸಿ
ಮಾಧ್ಯಮದವರು ನಮ್ಮ ಜೊತೆ ಕೈಜೋಡಿಸಿ. ಯಾಕೆ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗಲ್ಲ ನೋಡೋಣ ಎಂದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

3 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

22 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

59 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

1 hour ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago