ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು.
ಮೈಸೂರಿನ ಡಿಆರ್ಸಿ ಮಾಲ್ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್ ಕುಮಾರ್ ಅವರು ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿದರು.
ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಶಕ್ತಿಧಾಮದ ಮಕ್ಕಳ ಜೊತೆ ಸಿನಿಮಾ ನೋಡಿ ಖುಷಿ ಆಗಿದೆ. ಸಿನಿಮಾ ತುಂಬಾ ಚೆನ್ನಾಗಿದೆ. ಗೀತಾ ಹೆಸರಲ್ಲಿ ಒಂದು ಶಕ್ತಿಯಿದೆ. ಈ ಹಿಂದೆ ಅನೇಕ ಸಿನಿಮಾಗಳು ಗೀತಾ ಹೆಸರಿನಲ್ಲಿ ಬಂದು ಹಿಟ್ ಆಗಿವೆ. ಈ ಸಿನಿಮಾವು ಹಿಟ್ ಆಗುತ್ತದೆ. ನಾಗಶೇಖರ್ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ನನಗೂ ಒಂದು ಸಿನಿಮಾ ಡೈರೆಕ್ಟ್ ಮಾಡ್ತೀನಿ ಎಂದು ಈ ಹಿಂದೆ ಹೇಳಿದ್ದರು. ಅದಕ್ಕಾಗಿ ನಾನು ಕೂಡ ಕಾಯ್ತಾ ಇದ್ದೀನಿ ಎಂದರು.
ಇನ್ನು ಮಲ್ಟಿಫ್ಲೆಕ್ಸ್ನಲ್ಲಿ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲದಕ್ಕೂ ನಮ್ಮನ್ನ ಕೇಳಿದ್ರೆ ಹೇಗೆ? ನೀವು ಕೂಡ ನಮ್ಮ ಜೊತೆ ಕೈಜೋಡಿಸಿ
ಮಾಧ್ಯಮದವರು ನಮ್ಮ ಜೊತೆ ಕೈಜೋಡಿಸಿ. ಯಾಕೆ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗಲ್ಲ ನೋಡೋಣ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…