ಮೈಸೂರು: ನಗರದ ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್ ಸ್ಟೀಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ.
ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆಯೇ ಕರ್ನಾಟಕ ರಾಷ್ಟ್ರ ಸೇನೆ, ಇನ್ನಿತರ ಕೆಲ ಸಂಘಟನೆಗಳ ಕಾರ್ಯಕರ್ತರು ಈ ರಸ್ತೆಯ ಹಲವು ಭಾಗಗಳಲ್ಲಿ ಬುಧವಾರ(ಜನವರಿ.1) ಸಂಜೆಯ ವೇಳೆ ಪ್ರಿನ್ಸೆಸ್ ರಸ್ತೆ ಎಂಬ ಸ್ಟೀಕರ್ ಅಂಟಿಸಿ ಪೂಜೆ ಸಲ್ಲಿದ್ದರು.
ಈ ಸ್ಟೀಕರ್ಅನ್ನು ಕೆಆರ್ಎಸ್ ರಸ್ತೆಯ ಚೆಲುವಾಂಬ ಪಾರ್ಕ್ ಪ್ರತಿಮೆಯ ಬಳಿ ಹಾಗೂ ರಸ್ತೆಯ ಅನೇಕ ಕಡೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಕೃಷ್ಣಾಜಮ್ಮಣ್ಣಿ ಭಾವಚಿತ್ರವನ್ನು ಪ್ರಿನ್ಸೆಸ್ ಎಂಬ ನಾಮಫಲಕವಿರುವಂತೆ ಅಂಟಿಸಲಾಗಿತ್ತು. ಆದರೆ ಈ ಸ್ಟೀಕರ್ಗಳನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಅದನ್ನು ತೆರವುಗೊಳಿಸಿದವರು ಯಾವುದಾದರೂ ಸಂಘಟನೆಯ ಕಾರ್ಯಕರ್ತರ ಅಥವಾ ಬೇರೆಯವರ ಎಂಬುದು ತಿಳಿದು ಬಂದಿಲ್ಲ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…