ಮೈಸೂರು: ನಗರದ ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್ ಸ್ಟೀಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ.
ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆಯೇ ಕರ್ನಾಟಕ ರಾಷ್ಟ್ರ ಸೇನೆ, ಇನ್ನಿತರ ಕೆಲ ಸಂಘಟನೆಗಳ ಕಾರ್ಯಕರ್ತರು ಈ ರಸ್ತೆಯ ಹಲವು ಭಾಗಗಳಲ್ಲಿ ಬುಧವಾರ(ಜನವರಿ.1) ಸಂಜೆಯ ವೇಳೆ ಪ್ರಿನ್ಸೆಸ್ ರಸ್ತೆ ಎಂಬ ಸ್ಟೀಕರ್ ಅಂಟಿಸಿ ಪೂಜೆ ಸಲ್ಲಿದ್ದರು.
ಈ ಸ್ಟೀಕರ್ಅನ್ನು ಕೆಆರ್ಎಸ್ ರಸ್ತೆಯ ಚೆಲುವಾಂಬ ಪಾರ್ಕ್ ಪ್ರತಿಮೆಯ ಬಳಿ ಹಾಗೂ ರಸ್ತೆಯ ಅನೇಕ ಕಡೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಕೃಷ್ಣಾಜಮ್ಮಣ್ಣಿ ಭಾವಚಿತ್ರವನ್ನು ಪ್ರಿನ್ಸೆಸ್ ಎಂಬ ನಾಮಫಲಕವಿರುವಂತೆ ಅಂಟಿಸಲಾಗಿತ್ತು. ಆದರೆ ಈ ಸ್ಟೀಕರ್ಗಳನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಅದನ್ನು ತೆರವುಗೊಳಿಸಿದವರು ಯಾವುದಾದರೂ ಸಂಘಟನೆಯ ಕಾರ್ಯಕರ್ತರ ಅಥವಾ ಬೇರೆಯವರ ಎಂಬುದು ತಿಳಿದು ಬಂದಿಲ್ಲ.
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…