ಮೈಸೂರು ನಗರ

ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣ ವಿವಾದ: ಪ್ರಿನ್ಸೆಸ್‌ ರಸ್ತೆಯ ಸ್ಟೀಕರ್‌ ರಾತ್ರೋರಾತ್ರಿ ತೆರವು

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್‌ ಸ್ಟೀಕರ್‌ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ.

ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆಯೇ ಕರ್ನಾಟಕ ರಾಷ್ಟ್ರ ಸೇನೆ, ಇನ್ನಿತರ ಕೆಲ ಸಂಘಟನೆಗಳ ಕಾರ್ಯಕರ್ತರು ಈ ರಸ್ತೆಯ ಹಲವು ಭಾಗಗಳಲ್ಲಿ ಬುಧವಾರ(ಜನವರಿ.1) ಸಂಜೆಯ ವೇಳೆ ಪ್ರಿನ್ಸೆಸ್‌ ರಸ್ತೆ ಎಂಬ ಸ್ಟೀಕರ್‌ ಅಂಟಿಸಿ ಪೂಜೆ ಸಲ್ಲಿದ್ದರು.

ಈ ಸ್ಟೀಕರ್‌ಅನ್ನು ಕೆಆರ್‌ಎಸ್‌ ರಸ್ತೆಯ ಚೆಲುವಾಂಬ ಪಾರ್ಕ್‌ ಪ್ರತಿಮೆಯ ಬಳಿ ಹಾಗೂ ರಸ್ತೆಯ ಅನೇಕ ಕಡೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮತ್ತು ಕೃಷ್ಣಾಜಮ್ಮಣ್ಣಿ ಭಾವಚಿತ್ರವನ್ನು ಪ್ರಿನ್ಸೆಸ್‌ ಎಂಬ ನಾಮಫಲಕವಿರುವಂತೆ ಅಂಟಿಸಲಾಗಿತ್ತು. ಆದರೆ ಈ ಸ್ಟೀಕರ್‌ಗಳನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಅದನ್ನು ತೆರವುಗೊಳಿಸಿದವರು ಯಾವುದಾದರೂ ಸಂಘಟನೆಯ ಕಾರ್ಯಕರ್ತರ ಅಥವಾ ಬೇರೆಯವರ ಎಂಬುದು ತಿಳಿದು ಬಂದಿಲ್ಲ.

ಅರ್ಚನ ಎಸ್‌ ಎಸ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

9 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

10 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

10 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

11 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

11 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

12 hours ago