ಮೈಸೂರು ನಗರ

ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟ್ಯಾಂಡ್ : ಹಳ್ಳಿಹಕ್ಕಿ ಟೀಕೆ

ಮೈಸೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರಿಣಾಮ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್‌ನಿಂದ ೧೪ ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದರು ಎಂದು ದೂರಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್‌ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಕಾರಣರಾದರು. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರ ಮೇಶ್ವರ್ ಸೋಲಿಗೆ ಕಾರಣ ಯಾರು? ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರನ್ನೂ ಸೋಲಿಸಿದರು. ವರುಣ ಕ್ಷೇತ್ರದಲ್ಲಿ ಸ್ಪಽಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು.ಸಿದ್ದಲಿಂಗ ಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಬೈ ಎಲೆಕ್ಷನ್‌ನಲ್ಲಿ ಉಡುಪಿ ಮಠದ ಪೀಠಾಽಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯಗೆ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

6 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

1 hour ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

3 hours ago