ಮೈಸೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರಿಣಾಮ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್ನಿಂದ ೧೪ ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದರು ಎಂದು ದೂರಿದರು.
ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಕಾರಣರಾದರು. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರ ಮೇಶ್ವರ್ ಸೋಲಿಗೆ ಕಾರಣ ಯಾರು? ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರನ್ನೂ ಸೋಲಿಸಿದರು. ವರುಣ ಕ್ಷೇತ್ರದಲ್ಲಿ ಸ್ಪಽಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು.ಸಿದ್ದಲಿಂಗ ಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಬೈ ಎಲೆಕ್ಷನ್ನಲ್ಲಿ ಉಡುಪಿ ಮಠದ ಪೀಠಾಽಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯಗೆ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹರಿಹಾಯ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…