ಮೈಸೂರು ನಗರ

ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟ್ಯಾಂಡ್ : ಹಳ್ಳಿಹಕ್ಕಿ ಟೀಕೆ

ಮೈಸೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರಿಣಾಮ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್‌ನಿಂದ ೧೪ ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದರು ಎಂದು ದೂರಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್‌ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಕಾರಣರಾದರು. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರ ಮೇಶ್ವರ್ ಸೋಲಿಗೆ ಕಾರಣ ಯಾರು? ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರನ್ನೂ ಸೋಲಿಸಿದರು. ವರುಣ ಕ್ಷೇತ್ರದಲ್ಲಿ ಸ್ಪಽಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು.ಸಿದ್ದಲಿಂಗ ಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಬೈ ಎಲೆಕ್ಷನ್‌ನಲ್ಲಿ ಉಡುಪಿ ಮಠದ ಪೀಠಾಽಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯಗೆ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago