ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ನಾವು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರು ರಾಜರ ಸ್ಥಳದಿಂದ ಪ್ರಾರಂಭ ಮಾಡಿದ್ದೇವೆ. ಮಹಾರಾಜರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರಿಗೂ ಹೋಲಿಕೆ ಮಾಡುವ ನೀವು ಅವರ ಕಾಲಿನ ಧೂಳಿಗೂ ಸಮಾನರಲ್ಲ. ರಾತ್ರೋರಾತ್ರಿ 14 ಸೈಟ್ ಪಡೆದುಕೊಂಡಿರುವ ನಿಮಗೆ ದೇವರಾಜ ಅರಸು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಸಿದ್ದರಾಮಯ್ಯ ಹೆಚ್ಚು ಕಪ್ಪ ಕೊಟ್ಟರೆ ಮಾತ್ರ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರೀತಿಯ ಬೆಳವಣಿಗೆ ದೆಹಲಿಯಲ್ಲಿ ಪದೇ ಪದೇ ನಡೆಯುತ್ತಲೇ ಇದೆ ಎಂದು ಲೇವಡಿ ಮಾಡಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…