ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ನಾವು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರು ರಾಜರ ಸ್ಥಳದಿಂದ ಪ್ರಾರಂಭ ಮಾಡಿದ್ದೇವೆ. ಮಹಾರಾಜರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರಿಗೂ ಹೋಲಿಕೆ ಮಾಡುವ ನೀವು ಅವರ ಕಾಲಿನ ಧೂಳಿಗೂ ಸಮಾನರಲ್ಲ. ರಾತ್ರೋರಾತ್ರಿ 14 ಸೈಟ್ ಪಡೆದುಕೊಂಡಿರುವ ನಿಮಗೆ ದೇವರಾಜ ಅರಸು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಸಿದ್ದರಾಮಯ್ಯ ಹೆಚ್ಚು ಕಪ್ಪ ಕೊಟ್ಟರೆ ಮಾತ್ರ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರೀತಿಯ ಬೆಳವಣಿಗೆ ದೆಹಲಿಯಲ್ಲಿ ಪದೇ ಪದೇ ನಡೆಯುತ್ತಲೇ ಇದೆ ಎಂದು ಲೇವಡಿ ಮಾಡಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…