ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಪ್ರಸ್ತಾಪ ಮಾಡಿದ್ದೇ ನಾನು. ಮಹಾರಾಜರ ನಂತರ ಮೈಸೂರಿಗೆ ಸಿದ್ದರಾಮಯ್ಯ ಅತೀ ಹೆಚ್ಚು ಕೊಡುಗೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೆಸರಿಡಲು ನಾನೇ ಪ್ರಸ್ತಾಪ ಮಾಡಿದ್ದೇ. ಇದಕ್ಕೆ ವಿರೋಧ ಮಾಡುತ್ತಿರುವವರು ಸಿಎಂ ಸಿದ್ದರಾಮಯ್ಯ ಅವರ ವಿರೋಧಿಗಳು ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರು ಶಾಲಾ-ಕಾಲೇಜುಗಳ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯನವರ ಕೊಡುಗೆ ಬಹಳ ದೊಡ್ಡದು. ಪ್ರತಾಪ್ ಸಿಂಹ ಹೇಳಿದ್ದನ್ನು ಕೇಳಿ ಖುಷಿಯಾಯ್ತು. ಅವರು ಚೆನ್ನಾಗಿ ಸಿಎಂ ಸಿದ್ದರಾಮಯ್ಯ ಅವರ ಸಾಧನೆಯನ್ನು ವಿವರಿಸಿದ್ದಾರೆ. ಯಾರಿಗೆ ಮನಸ್ಸು ಶುದ್ಧಿ ಇಲ್ಲವೋ ಅವರುಗಳು ಮಾತ್ರ ಸಿದ್ದರಾಮಯ್ಯನವರ ಹೆಸರನ್ನು ವಿರೋಧ ಮಾಡುತ್ತಾರೆ. ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಬಿಜೆಪಿಯವರು ಸಿದ್ದರಾಮಯ್ಯರ ಮೇಲೆ ಇಲ್ಲ ಸಲ್ಲದ ಆಪಾದನೆ ಮಾಡುತ್ತಿದ್ದಾರೆ. ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆಆರ್ಎಸ್ ರಸ್ತೆಗೆ ಇಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…