ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಬಾರಿ ಸಿದ್ದರಾಮಯ್ಯ ತಮ್ಮ ಅವಧಿ ಪೊರೈಸಬೇಕು. ಮುಂದಿನ ಅವಧಿಗೂ ಸಿದ್ದರಾಮಯ್ಯ ಇರಬೇಕು ಎಂಬುದಕ್ಕೆ ನಮ್ಮ ತಕರಾರು ಇಲ್ಲ. ‘ಮತ್ತೆ ಮುಖ್ಯಮಂತ್ರಿ’ ಎಂಬ ನಾಟಕವನ್ನು ಸಿಎಂ ಸಿದ್ದರಾಮಯ್ಯ ನೋಡಬೇಕು. ಮತ್ತೆ ಮುಖ್ಯಮಂತ್ರಿ ನಾಟಕದಲ್ಲಿ ಇಡೀ ರಾಜಕೀಯದ ಚಿತ್ರಣವೇ ಇದೆ. ಸಿದ್ದರಾಮಯ್ಯ ಯಾವತ್ತೂ ಹೊಗಳಿಕೆಗೆ ಬೆಲೆ ಕೊಟ್ಟವರಲ್ಲ. ಇದ್ದರೆ ಇರುತ್ತೆ, ಹೋದ್ರೆ ಹೋಗುತ್ತೆ ಬಿಡಿ ಎನ್ನುವ ಮನಸ್ಥಿತಿ ಸಿದ್ದರಾಮಯ್ಯರದು. ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗುತ್ತದೆ. ಸಿದ್ದರಾಮಯ್ಯ ಮುಳುಗಿದರೆ ಅಹಿಂದ ವರ್ಗ ಮುಳುಗುತ್ತದೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರಕಾರ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನನಾ ಸಿಎಂ ಸಿಎಂ ಎಂದು ಸುಮ್ಮನೆ ಘೋಷಣೆ ಕೂಗ್ತಿರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೆ ಮುಂದಿನ ಸಿಎಂ ಸಿಎಂ ಘೋಷಣೆ ಕೂಗುತ್ತಾರೆ. ದಲಿತ ಸಂಘಟನೆಯ ಮುಖಂಡರು ಬುದ್ದಿವಂತರು. ಸಿದ್ದರಾಮಯ್ಯರೆ ಸಿಎಂ ಆಗಿರಲಿ. ಅವರ ಬದಲಾಗುವುದಾದರೆ ದಲಿತರಿಗೆ ಅವಕಾಶ ಕೊಡಿ ಅಂತಾರೆ ಎಂದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…